22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

ಬೆಳ್ತಂಗಡಿ: ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು. ಜನವರಿ 20 ಮತ್ತು 21ರಂದು ಸವಣೂರಿನಲ್ಲಿ ನಡೆದ ಜಿಲ್ಲಾಮಟ್ಟದ ಯುವಜನ ಮೇಳದಲ್ಲಿ ಬೆಳ್ತಂಗಡಿ ತಾಲೂಕಿನಿಂದ ಮುಂಡೂರು ಶ್ರೀ ಶಾರದಾಂಬ ಯುವಕ ಮಂಡಲವನ್ನು ಪ್ರತಿನಿಧಿಸಿ ಯುವಕರ ವೈಯಕ್ತಿಕ ವಿಭಾಗದ ಭಾವಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ಅಭಿಲಾಶ್ ಭಟ್ ಮುಂಡೂರು ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಯುವತಿಯರ ವೈಯಕ್ತಿಕ ವಿಭಾಗದ ಭಾವಗೀತೆ ಸ್ಪರ್ಧೆಯಲ್ಲಿ ಬಿ ಆರ್ ಎ ಕಲಾ ಮತ್ತು ಕ್ರೀಡಾ ಸಂಘ ಧರ್ಮಸ್ಥಳದ ಸುಪ್ರೀತಾ ಇವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು, ರಂಗಗೀತೆಯಲ್ಲಿ ಕೀರ್ತನ ಕಲಾತಂಡ (ರಿ )ಮುಂಡಾಜೆ ಇದರ ನಾರಾಯಣಶೆಟ್ಟಿ ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಗುಂಪು ಸ್ಪರ್ಧೆಯಲ್ಲಿ ಜಾನಪದ ನೃತ್ಯ ದ್ವಿತೀಯ ತುಳು ಪ್ರಾದೇಶಿಕ ನೃತ್ಯ ದ್ವಿತೀಯ, ಸೋಬಾನೆ ಹಾಡು ತೃತೀಯ, ಪಾಡ್ದನ ತೃತೀಯ, ರಾಗಿ ಬೀಸುವ ಹಾಡು ತೃತೀಯ, ಕೋಲಾಟ ತೃತೀಯ ಸ್ಥಾನಗಳನ್ನು ಬಿ ಆರ್ ಎ ಕಲಾ ಮತ್ತು ಕ್ರೀಡಾ ಸಂಘವು ಪಡೆದಿರುತ್ತದೆ.

ಗುಂಪು ಸ್ಪರ್ಧೆಯಾದ ರಂಗಗೀತೆಯಲ್ಲಿ ಕೀರ್ತನ ಕಲಾತಂಡ ಮುಂಡಾಜೆ ತೃತೀಯ ಸ್ಥಾನವನ್ನು ಪಡೆದಿರುತ್ತದೆ.

Related posts

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya
error: Content is protected !!