ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿ ಯ ಬಗ್ಗೆ ಮಾಹಿತಿ ಕಾರ್ಯಾಗಾರವು ತಾಲೂಕು ಆರೋಗ್ಯ ಇಲಾಖೆಯ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಸಿ| ಅಮ್ಮಿ ಅವರಿಂದ ನಡೆಯಿತು.

ಆರೋಗ್ಯ ಇಲಾಖೆಯ ವೇಣೂರು ಕ್ಷೇತ್ರದ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಸಿ| ಪುಷ್ಪ , ಸಿ| ರಮ್ಯ , ಅಜಯ್ ರವರ ಸಹಕಾರದಲ್ಲಿ ಮಕ್ಕಳಿಗೆ ಮಾಹಿತಿ ನೀಡುವಲ್ಲಿ ಸಹಕರಿಸಿತು. ಈ ಸಂದರ್ಭದಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜೆಸಿಂತಾ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Comment

error: Content is protected !!