22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡದ ದೂರಿನಂತೆ ಎಫ್ಐಆರ್ ದಾಖಲಾಗಿದೆ‌.

ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್(47) ಮತ್ತು ಕಾರ್ಮಿಕರನ್ನು ಕರೆತಂದು ಕೆಲಸ ಮಾಡುತ್ತಿದ್ದ ಹಾಸನ ಜಿಲ್ಲೆಯ ವಡ್ಡರಹಳ್ಳಿ ನಿವಾಸಿ ಕಿರಣ್ (24) ಘಟನೆ ಬಳಿಕ ವೇಣೂರಿನಿಂದ ಅಲ್ಟೋ ಕಾರಿನಲ್ಲಿ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡಿದ್ದು ನಂತರ ವಿಚಾರಣೆ ನಡೆಸಿ ಇಬ್ಬರನ್ನು ಜ.29 ರಂದು ಮಧ್ಯರಾತ್ರಿ ಬೆಳ್ತಂಗಡಿ ನ್ಯಾಯಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದು‌.‌ ಜ.30 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲು ಸೂಚಿಸಿದ್ದಾರೆ‌.

Related posts

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya
error: Content is protected !!