ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಪುಂಜಾಲಕಟ್ಟೆ: ದ.ಕ.ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ನೇತೃತ್ವದಲ್ಲಿ ಮುಂಬಯಿ ಉದ್ಯಮಿ ಕಕ್ಕೆಪದವು ಕಮಲ ನಿವಾಸ ನಾರಾಯಣ ಶೆಟ್ಟಿ ಇವರ ಸಾರಥ್ಯದಲ್ಲಿ ಮಾರ್ಚ್ 24ರಂದು ಗಂಟೆ 11.21ರ ಒದಗುವ ವೃಷಭ ಲಗ್ನ ಸುಮೂಹರ್ತದಲ್ಲಿ ವೇ|ಮೂ| ಶ್ರೀ ಕೃಷ್ಣ ಭಟ್ ಕಾರ್ಕಳ ಮತ್ತು ಅರ್ಚಕ ವೃಂದದ ಮಂತ್ರ ಘೋಷಣೆಗಳೊಂದಿಗೆ 16ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ನವ ವಧುವರು ಹಸೆಮಣೆಯನ್ನೇರಿ ಗ್ರಹಸ್ಥಾಶ್ರಮದ ದೀಕ್ಷೆಯನ್ನು ಪಡೆಯಲ್ಲಿದ್ದಾರೆ.

ಈ ಸಮಾರಂಭದಲ್ಲಿ ರಾಜ್ಯದ ಶ್ರೇಷ್ಠ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರಧಾನ ಮತ್ತು ಸ್ವಸ್ತಿಕ್ ಸಂಭ್ರಮ್ ಪುರಸ್ಕಾರ ಸಮಾರಂಭವು ಜರಗಲಿರುವುದು.

ಮಾ.17 ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸಾಮೂಹಿಕ ವಿವಾಹದ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Leave a Comment

error: Content is protected !!