ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ ಗ್ರಾಮ ಸಮಿತಿಯ ಆಯೋಜನೆಯಲ್ಲಿ ಜ.28 ರಂದು ಬಸವನಗುಡಿ ಧರ್ಮ ಚಾವಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ ನಡೆಯಿತು.

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕ ಸುಕೇಶ್ ಕೆ ಹಾಗೂ ಪತ್ರಕರ್ತೆ ಕುಮಾರಿ ಯೋಗಿನಿ ಮಚ್ಚಿನ ಇವರು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ ಗ್ರಾಮ ಸಮಿತಿಯ ಅಧ್ಯಕ್ಷ ಆನಂದ ಹಟತೋಡಿ, ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ, ಕುಕ್ಕಳ ಗ್ರಾಮ ಸಮಿತಿಯ ಕಾರ್ಯದರ್ಶಿ ಕುಮಾರಿ ರಂಜಿನಿ ಮಂಜಲ್ಪಲೆ, ಉಪಕಾರ್ಯದರ್ಶಿ ಆನಂದ ಬೆರ್ಕಳ, ಗೌರವಾಧ್ಯಕ್ಷ ರಾಮ.ಕೆ., ಗಿರಿಯಪ್ಪ, ತುಕ್ರಪ್ಪ ಬೆರ್ಕಳ ಉಪಸ್ಥಿತರಿದ್ದರು.

20 ಕ್ಕೂ ಹೆಚ್ಚು ಮಕ್ಕಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಮಿತಿಯ ಜೊತೆ ಕಾರ್ಯದರ್ಶಿ ಶಿವಕುಮಾರ್ ಸ್ವಾಗತಿಸಿ, ಕುಕ್ಕಳ ಗ್ರಾಮ ಸಮಿತಿಯ ಕೋಶಾಧಿಕಾರಿ ನವೀನ್ ನಿರೂಪಿಸಿ, ಧನ್ಯವಾದವಿತ್ತರು.

Related posts

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya
error: Content is protected !!