July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

ಬೆಳ್ತಂಗಡಿ : ಕುಕ್ಕೇಡಿ ಪಟಾಕಿ ನಿರ್ಮಾಣ ಸ್ಥಳದಲ್ಲಿ ನಡೆದ ಸ್ಫೋಟ ಪ್ರಕರಣದ ಸ್ಥಳಕ್ಕೆ ಬೆಳ್ತಂಗಡಿ ಧರ್ಮಾ ಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿಸ್ಫೋಟದಿಂದ ಪೂರ್ಣ ಮತ್ತು ಅಂಶಿಕವಾಗಿ ಹಾನಿಗೊಳಗಾದ ಮನೆಗಳನ್ನು ಸಂದರ್ಶಸಿ ಮನೆಯವರಿಂದ ಘಟನೆಯ ನೇರ ಚಿತ್ರವನ್ನು ಪಡೆದರು.
ಸಾಮಾನ್ಯವಾಗಿ ಆ ಸಮಯದಲ್ಲಿ ಮನೆಯಲ್ಲಿ ಇರುವವರು ಪವಾಡ ಸದೃಶ್ಯವಾಗಿ ಅಂದು ಮನೆಯಲ್ಲಿ ಇಲ್ಲದ ಕಾರಣ ಜೀವಾಪಾಯದಿಂದ ಪಾರಾದರು ಎಂದು ಮನೆಯವರು ವಿವರಿಸಿದರು. ಒಂದು ಮನೆ ಸಂಪೂರ್ಣ ಹಾಗೂ ಇನ್ನೆರಡು ಮನೆಗಳು ಅಂಶಿಕವಾಗಿ ಹಾನಿಯಾಗಿದ್ದು ಸೂಕ್ತ ತನಿಖೆ ಮತ್ತು ಹಾನಿಗೊಳಗಾದವರಿಗೆ ಸೂಕ್ತ ಪರಿಹಾರಕ್ಕೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಗ್ರಹಿಸಿದರು.

ಧರ್ಮ ಪ್ರಾಂತ್ಯದ ವಿಕಾರ್ ಜೆನರಲ್ ಅತಿ ವಂದನಿಯ ಜೋಸ್ ವಲಿಯಪರಂಭಿಲ್, ಬೆಳ್ತಂಗಡಿ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಫೋರೋನ ಅಧ್ಯಕ್ಷರಾದ ರೆಜಿ ಜಾರ್ಜ್ ಪಡಂಗಡಿ ಹಾಗೂ ಬಿಜು ಬೆಳ್ತಂಗಡಿ ವೇಣೂರು ಧರ್ಮ ಕೇಂದ್ರದ ಸದಸ್ಯರು ಧರ್ಮಾ ಧ್ಯಕ್ಷರ ಉಪಸ್ಥಿತರಿದ್ದರು.

ವೆಂಕಪ್ಪ ಮೂಲ್ಯ, ಲೈಸ್ಸಿ ಚೆರಾಡಿ ಹಾಗೂ ಹಾನಿಗೊಳಗಾದ ಜೋಸೆಫ್ ಮಾತ್ಯು ಇವರ ಮನೆಗಳಿಗೆ ಭೇಟಿ ನೀಡಿ ಸಂತೈಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ಕಕ್ಯಪದವು ಎಲ್.ಸಿ.ಆರ್ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya
error: Content is protected !!