23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

ಬೆಳ್ತಂಗಡಿ : ಕುಕ್ಕೇಡಿ ಪಟಾಕಿ ನಿರ್ಮಾಣ ಸ್ಥಳದಲ್ಲಿ ನಡೆದ ಸ್ಫೋಟ ಪ್ರಕರಣದ ಸ್ಥಳಕ್ಕೆ ಬೆಳ್ತಂಗಡಿ ಧರ್ಮಾ ಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿಸ್ಫೋಟದಿಂದ ಪೂರ್ಣ ಮತ್ತು ಅಂಶಿಕವಾಗಿ ಹಾನಿಗೊಳಗಾದ ಮನೆಗಳನ್ನು ಸಂದರ್ಶಸಿ ಮನೆಯವರಿಂದ ಘಟನೆಯ ನೇರ ಚಿತ್ರವನ್ನು ಪಡೆದರು.
ಸಾಮಾನ್ಯವಾಗಿ ಆ ಸಮಯದಲ್ಲಿ ಮನೆಯಲ್ಲಿ ಇರುವವರು ಪವಾಡ ಸದೃಶ್ಯವಾಗಿ ಅಂದು ಮನೆಯಲ್ಲಿ ಇಲ್ಲದ ಕಾರಣ ಜೀವಾಪಾಯದಿಂದ ಪಾರಾದರು ಎಂದು ಮನೆಯವರು ವಿವರಿಸಿದರು. ಒಂದು ಮನೆ ಸಂಪೂರ್ಣ ಹಾಗೂ ಇನ್ನೆರಡು ಮನೆಗಳು ಅಂಶಿಕವಾಗಿ ಹಾನಿಯಾಗಿದ್ದು ಸೂಕ್ತ ತನಿಖೆ ಮತ್ತು ಹಾನಿಗೊಳಗಾದವರಿಗೆ ಸೂಕ್ತ ಪರಿಹಾರಕ್ಕೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಗ್ರಹಿಸಿದರು.

ಧರ್ಮ ಪ್ರಾಂತ್ಯದ ವಿಕಾರ್ ಜೆನರಲ್ ಅತಿ ವಂದನಿಯ ಜೋಸ್ ವಲಿಯಪರಂಭಿಲ್, ಬೆಳ್ತಂಗಡಿ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಫೋರೋನ ಅಧ್ಯಕ್ಷರಾದ ರೆಜಿ ಜಾರ್ಜ್ ಪಡಂಗಡಿ ಹಾಗೂ ಬಿಜು ಬೆಳ್ತಂಗಡಿ ವೇಣೂರು ಧರ್ಮ ಕೇಂದ್ರದ ಸದಸ್ಯರು ಧರ್ಮಾ ಧ್ಯಕ್ಷರ ಉಪಸ್ಥಿತರಿದ್ದರು.

ವೆಂಕಪ್ಪ ಮೂಲ್ಯ, ಲೈಸ್ಸಿ ಚೆರಾಡಿ ಹಾಗೂ ಹಾನಿಗೊಳಗಾದ ಜೋಸೆಫ್ ಮಾತ್ಯು ಇವರ ಮನೆಗಳಿಗೆ ಭೇಟಿ ನೀಡಿ ಸಂತೈಸಿದರು.

Related posts

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya
error: Content is protected !!