25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಅನುಮಾನಗಳು ಕಾಡುತ್ತಿವೆ, ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಕಾರ್ಮಿಕರ ದೇಹಗಳು ಚಿದ್ರ ಚಿದ್ರಾ ಗಳಾಗಿವೆ. ಹಾಗೂ ಅಲ್ಲಿ ಸ್ಫೋಟಗೊಂಡ ಕಟ್ಟಡ ಮತ್ತು ಕಟ್ಟಡದ ಹಿಂದೆ ಇರುವ ಕಲ್ಲಿನಿಂದ ನಿರ್ಮಿಸಿದ ಕಪೌಂಡ್ ಚಿದ್ರಾ ಚಿದ್ರಾಗೊಂಡಿದ್ದು ಮತ್ತು ಸುಮಾರು ಮೂರು ಕಿಲೋ ಮೀಟರ್ ವ್ಯಾಪ್ತಿಗೆ ಸ್ಫೋಟಕದ ಕಂಪನಗೊಂಡಿದ್ದು ಹಾಗೂ ಸ್ಫೋಟಕದ ತೀವ್ರತೆಗೆ ಸುಮಾರು ಹದಿನೈದಕ್ಕಿಂತ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು ಹಾನಿಗೊಳಗಾಗಿವೆ. ಹಾಗೂ ಸ್ಫೋಟಕದ ಶಬ್ದ ಹತ್ತು ಕಿಲೋ ಮೀಟರ್ ವರೆಗೆ ಕೇಳಿಸಿರುತ್ತದೆ. ಇದು ಕೇವಲ ಪಟಾಕಿಯಿಂದ ನಡೆದಿರಳು ಸಾಧ್ಯವಿಲ್ಲ ಇದರ ತೀವ್ರತೆಯನ್ನು ಗಮನಿಸಿದಾಗ ಗ್ರಾನೈಟ್ ಮಾದರಿಯ ಸ್ಫೋಟಕ ತಯಾರಾಗುತ್ತೀದೆ ಎಂದು ಅನುಮಾನ ಹುಟ್ಟಿಕೊಂಡಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಯೋಜಕ ನಿರಂಜನ್, ಜಯ ಪ್ರಸಾದ್, ಸಂತೋಷ್ ನಂದಿಬೆಟ್ಟ, ಗೋಪಾಲ್ ಶೆಟ್ಟಿ, ಧನಂಜಯ ಕುಲಾಲ್, ಜಗದೀಶ್ ಚಂದ್ರ, ಯಾದವ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya
error: Content is protected !!