25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಅನುಮಾನಗಳು ಕಾಡುತ್ತಿವೆ, ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಕಾರ್ಮಿಕರ ದೇಹಗಳು ಚಿದ್ರ ಚಿದ್ರಾ ಗಳಾಗಿವೆ. ಹಾಗೂ ಅಲ್ಲಿ ಸ್ಫೋಟಗೊಂಡ ಕಟ್ಟಡ ಮತ್ತು ಕಟ್ಟಡದ ಹಿಂದೆ ಇರುವ ಕಲ್ಲಿನಿಂದ ನಿರ್ಮಿಸಿದ ಕಪೌಂಡ್ ಚಿದ್ರಾ ಚಿದ್ರಾಗೊಂಡಿದ್ದು ಮತ್ತು ಸುಮಾರು ಮೂರು ಕಿಲೋ ಮೀಟರ್ ವ್ಯಾಪ್ತಿಗೆ ಸ್ಫೋಟಕದ ಕಂಪನಗೊಂಡಿದ್ದು ಹಾಗೂ ಸ್ಫೋಟಕದ ತೀವ್ರತೆಗೆ ಸುಮಾರು ಹದಿನೈದಕ್ಕಿಂತ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು ಹಾನಿಗೊಳಗಾಗಿವೆ. ಹಾಗೂ ಸ್ಫೋಟಕದ ಶಬ್ದ ಹತ್ತು ಕಿಲೋ ಮೀಟರ್ ವರೆಗೆ ಕೇಳಿಸಿರುತ್ತದೆ. ಇದು ಕೇವಲ ಪಟಾಕಿಯಿಂದ ನಡೆದಿರಳು ಸಾಧ್ಯವಿಲ್ಲ ಇದರ ತೀವ್ರತೆಯನ್ನು ಗಮನಿಸಿದಾಗ ಗ್ರಾನೈಟ್ ಮಾದರಿಯ ಸ್ಫೋಟಕ ತಯಾರಾಗುತ್ತೀದೆ ಎಂದು ಅನುಮಾನ ಹುಟ್ಟಿಕೊಂಡಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಯೋಜಕ ನಿರಂಜನ್, ಜಯ ಪ್ರಸಾದ್, ಸಂತೋಷ್ ನಂದಿಬೆಟ್ಟ, ಗೋಪಾಲ್ ಶೆಟ್ಟಿ, ಧನಂಜಯ ಕುಲಾಲ್, ಜಗದೀಶ್ ಚಂದ್ರ, ಯಾದವ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya
error: Content is protected !!