23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

ಮೊಗ್ರು : ಇಲ್ಲಿನ ಲಕ್ಷ್ಮಿ ನಾರಾಯಣ ಭಜನಾ ಮಂದಿರ (ರಿ), ಮತ್ತು ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ‘ಎಲ್.ಎನ್. ಟ್ರೋಫಿ-2024’ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ವಠಾರದಲ್ಲಿ ಜ28ರಂದು ನಡೆಯಿತು.

ಊಂತನಾಜೆ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ ಉಪ್ಪ ರವರು ಪಂದ್ಯಾಟವನ್ನು ಉದ್ಘಾಟಿಸಿದರು.
ಸಂಜೆ ನೆರವೇರಿದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಖಂಡಿಗ ವಹಿಸಿ ಮಾತನಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಪ್ರಭಾಕರ ಗೌಡ ಗುತ್ಯೋಡಿ, ಧರ್ಣಪ್ಪ ಗೌಡ ಅತ್ಯರಕಂಡ, ಬಾಬು ಬೆಲ್ಚಾಡ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಅಧ್ಯಕ್ಷ ಸಂಕಪ್ಪ ಗೌಡ , ಮಾಜಿ ಅಧ್ಯಕ್ಷ ಶಿವಣ್ಣ ಗೌಡ ಪರಪ್ಪಾದೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಅಚುಶ್ರೀ ಬಾಂಗೇರು ಹಾಗೂ ಬಂದಾರು ಗ್ರಾಮಪಂಚಾಯತ್ ಸದಸ್ಯೆ ಮಂಜುಶ್ರೀ ಊಂತನಾಜೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಅಧ್ಯಕ್ಷ ನಿತಿನ್ ಕುಮಾರ್ ಊಂತನಾಜೆ , ಕಾರ್ಯದರ್ಶಿ ವಿನಿತ್ ಕುಮಾರ್ ಊಂತನಾಜೆ, ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಕಾರ್ಯದರ್ಶಿ ಗಂಗಾಧರ ಗೌಡ ದಂಡುಗ ಉಪಸ್ಥಿತರಿದ್ದರು.

ಪ್ರವೀಣ್ ಕೊಯ್ಯೂರು ಹಾಗೂ ಕೇವನ್ ತೀರ್ಪುಗಾರರಾಗಿ ಪಂದ್ಯಾಟವನ್ನು ಮುನ್ನಡೆಸಿದರು. ಜಗದೀಶ್ ಬಾರಿಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!