23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್ ಎಸ್ ಘಟಕ, ಲಯನ್ಸ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಇವುಗಳ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜ.28 ರಂದು ಗುರಿಪಳ್ಳದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.

ಲಕ್ಷ್ಮೀ ಇಂಡಸ್ಟ್ರೀಸ್ ನ ಮಾಲಕ ಮೋಹನ್ ಕುಮಾರ್ ಶಿಬಿರವನ್ನು ಉದ್ಘಾಟಿಸಿದರು. ಶ್ರೀ ದಂತ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ| ಎಂ.ಎಂ ದಯಾಕರ್ ಅಧ್ಯಕ್ಷತೆ ವಹಿಸಿದ್ದರು. ಲಯನ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಲಿಯೋ ಕ್ಲಬ್ ಅಧ್ಯಕ್ಷೆ ಅಪ್ಸರಾ ಎಚ್. ಆರ್. ಗೌಡ, ಕಾರ್ಯದರ್ಶಿ ಅನಂತಕೃಷ್ಣ,ಲಿಯೋ ಕಾರ್ಯದರ್ಶಿ ಸಿ.ಎ.ನಿರೀಕ್ಷಾ ಎನ್ ನಾವರ , ಸಂಘಟಕರಾದ ನಿತ್ಯಾನಂದ ನಾವರ, ಎಚ್. ರಾಮಕೃಷ್ಣ ಗೌಡ, ಡಾ. ದೇವಿ ಪ್ರಸಾದ್ ಬೊಲ್ಮ, ಅಶೋಕ್ ಕುಮಾರ್ ಬಿ.ಪಿ, ಲಿಯೋ ಕ್ಲಬ್ ಸದಸ್ಯರುಗಳಾದ ದೀಕ್ಷಿತ್, ನಿಕ್ಷೇಪ್ ಹಾಗೂ ಇತರ ಲಿಯೋ ಹಾಗೂ ಲಯನ್ಸ್ ಸದಸ್ಯರು ಉಪಸ್ಥಿತರಿದ್ದರು.


ಶಿಬಿರದಲ್ಲಿ ದಂತ ವಿಭಾಗ, ಕಣ್ಣು ಪರೀಕ್ಷೆ, ಕನ್ನಡಕ ವಿತರಣೆ, ಇತರ ಜನರಲ್ ಆರೋಗ್ಯ ತಪಾಸಣೆ ಇತ್ಯಾದಿ ವ್ಯವಸ್ಥೆ ಮಾಡಲಾಗಿತ್ತು. 400ಕ್ಕೂ ಅಧಿಕ ಮಂದಿ ಪ್ರಯೋಜನ ಪಡೆದರು

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಭಿನಂದನ ಕಾರ್ಯಕ್ರಮ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!