July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್ ಎಸ್ ಘಟಕ, ಲಯನ್ಸ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಇವುಗಳ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜ.28 ರಂದು ಗುರಿಪಳ್ಳದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.

ಲಕ್ಷ್ಮೀ ಇಂಡಸ್ಟ್ರೀಸ್ ನ ಮಾಲಕ ಮೋಹನ್ ಕುಮಾರ್ ಶಿಬಿರವನ್ನು ಉದ್ಘಾಟಿಸಿದರು. ಶ್ರೀ ದಂತ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ| ಎಂ.ಎಂ ದಯಾಕರ್ ಅಧ್ಯಕ್ಷತೆ ವಹಿಸಿದ್ದರು. ಲಯನ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಲಿಯೋ ಕ್ಲಬ್ ಅಧ್ಯಕ್ಷೆ ಅಪ್ಸರಾ ಎಚ್. ಆರ್. ಗೌಡ, ಕಾರ್ಯದರ್ಶಿ ಅನಂತಕೃಷ್ಣ,ಲಿಯೋ ಕಾರ್ಯದರ್ಶಿ ಸಿ.ಎ.ನಿರೀಕ್ಷಾ ಎನ್ ನಾವರ , ಸಂಘಟಕರಾದ ನಿತ್ಯಾನಂದ ನಾವರ, ಎಚ್. ರಾಮಕೃಷ್ಣ ಗೌಡ, ಡಾ. ದೇವಿ ಪ್ರಸಾದ್ ಬೊಲ್ಮ, ಅಶೋಕ್ ಕುಮಾರ್ ಬಿ.ಪಿ, ಲಿಯೋ ಕ್ಲಬ್ ಸದಸ್ಯರುಗಳಾದ ದೀಕ್ಷಿತ್, ನಿಕ್ಷೇಪ್ ಹಾಗೂ ಇತರ ಲಿಯೋ ಹಾಗೂ ಲಯನ್ಸ್ ಸದಸ್ಯರು ಉಪಸ್ಥಿತರಿದ್ದರು.


ಶಿಬಿರದಲ್ಲಿ ದಂತ ವಿಭಾಗ, ಕಣ್ಣು ಪರೀಕ್ಷೆ, ಕನ್ನಡಕ ವಿತರಣೆ, ಇತರ ಜನರಲ್ ಆರೋಗ್ಯ ತಪಾಸಣೆ ಇತ್ಯಾದಿ ವ್ಯವಸ್ಥೆ ಮಾಡಲಾಗಿತ್ತು. 400ಕ್ಕೂ ಅಧಿಕ ಮಂದಿ ಪ್ರಯೋಜನ ಪಡೆದರು

Related posts

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya
error: Content is protected !!