September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಕುಕ್ಕೇಡಿ ಗ್ರಾಮದ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ನಡೆದ ಸ್ಪೋಟದ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು. ದುರ್ಘಟನೆ ಯಿಂದ ಮೂವರು ಕಾರ್ಮಿಕರ ಜೀವ ಹಾನಿಯಾಗಿದ್ದು.ಸ್ಪೋಟದಿಂದ ಹಾನಿಯಾದ ಸಮೀಪದ ಮನೆಗಳಿಗೂ ಭೇಟಿ ನೀಡಿದರು.

ನಂತರ ಮಾತನಾಡಿ ಈಗಾಗಲೇ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಸರಿಸುಮಾರು 24 ಲೈಸೆನ್ಸ್ ತಾಲೂಕಿನಲ್ಲಿ ಇದೆ, ಅದರಲ್ಲಿ ಮೊನ್ನೆ ನಡೆದಂತಹ ಆನೇಕಲ್ಲು ಘಟನೆ ಆದ ಮೇಲೆ ಎಲ್ಲರ ಜಾಗ ಪರಿಶೀಲನೆ ಮಾಡಿದ್ದಾರೆ, ಎಲ್ಲರ ಲೈಸೆನ್ಸ್ ನ್ನು ಕೂಡ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ರು. ಮಾರ್ಚ್ ವರೆಗೆ ಲೈಸೆನ್ಸ್ ಅವಕಾಶ ಇತ್ತು ಎಂಬ ಮಾಹಿತಿಯನ್ನು ಕೊಟ್ಟಿದ್ದಾರೆ. ಎಲ್ಲಾ ತನಿಖಾ ತಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದೆ. ಸುತ್ತಮುತ್ತಲಿನ ಮನೆಗಳಿಗೂ ಭೇಟಿ ಕೊಟ್ಟಿದ್ದೇನೆ, ಹಾನಿಯಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಮಾಡುತ್ತೇನೆ. ಅದರೊಂದಿಗೆ ಮೃತ ಕಾರ್ಮಿಕರಿಗೂ ಕೂಡ ಪರಿಹಾರ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು.

Related posts

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪ್ರಕ್ರಿಯೆ ಆರಂಭ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!