23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ , ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಮತ್ತು ವಕೀಲರಿಂದ, ವಕೀಲರಿಗಾಗಿ, ವಕೀಲರಿಗೋಸ್ಕರ ನೇರ ಸಂವಾದ ಕಾರ್ಯಕ್ರಮವು ಜ.31 ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಎಂ ಬದರಿನಾಥ ಸಂಪಿಗೆತ್ತಾಯ ಮಾತನಾಡಿ ನ್ಯಾಯಾಲಯದ ಕಾರ್ಯವಿಧಾನಗಳ ಮೂಲಭೂತ ಅಧ್ಯಯನ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ವಕೀಲರು ಹಾಗೂ ಯುವ ವಕೀಲರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿ, ಯುವ ವಕೀಲರ ವೇದಿಕೆಯ ಕೋಶಾಧಿಕಾರಿ ಜಗದೀಶ್ ಧನ್ಯವಾದವಿತ್ತರು.

Related posts

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!