ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವರ ದರ್ಶನ ಪಡೆದರು.
ನಿನ್ನೆ ರಾತ್ರಿ ಪುಂಜಾಲಕಟ್ಟೆಯಿಂದ ಧರ್ಮಸ್ಥಳಕ್ಕೆ ಕಾರ್ಯಕರ್ತರ ಬೈಕ್‌ ರ್‍ಯಾಲಿ ಮೂಲಕ ಕ್ಷೇತ್ರಕ್ಕೆ ಬಂದು ತಂಗಿದ್ದ ವಿಜಯೇಂದ್ರ, ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಯಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್‌ ಸದಸ್ಯ ಪ್ರತಾಪ ಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಮುಂತಾದವರು ರಾಜ್ಯಾಧ್ಯಕ್ಷರ ಜೊತೆಗಿದ್ದರು.

Leave a Comment

error: Content is protected !!