July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ಜ.28 ರಂದು ಶ್ರೀ ಮಾತ ಲಕ್ಷಣಿ ವ್ರದ್ಧಾಶ್ರಮ ಫರಂಗಿಪೇಟೆಯಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ನೆರವು ಕಾರ್ಯಕ್ರಮ-2024 ಆಯೋಜಿಸಿದ್ದರು.

ಅಲ್ಲಿನ ವೃದ್ಧಾಶ್ರಮಕ್ಕೆ 15,000ರೂ ಮೌಲ್ಯದ ಗ್ರೈಂಡರ್ ವಿತರಿಸಿದರು ಹಾಗೂ 3,500ರೂ ಮೌಲ್ಯದ ಡೈಪರ್ ಅನ್ನು ವಿತರಿಸಿದರು.

ನಂತರ ಸಮಾಜದಲ್ಲಿ ತಮ್ಮಂತೆಯೇ ಸಮಾಜಸೇವೆ ಮಾಡುವ ಆಯ್ದ 12 ಸಂಘಸಂಸ್ಥೆಗಳಿಗೆ ಗೌರವರ್ಪಣೆ ಮಾಡಿದರು..

ಈ ಸಂದರ್ಭದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅರ್ಜುನ್ ಬಂಡರ್ಕಾರ್ , ಸ್ಪೂರ್ತಿ ವಿಶೇಷ ಶಾಲೆಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್ , ಆಶ್ರಮದ ಸ್ಥಾಪಕಾಧ್ಯಕ್ಷರಾದ ಹರೀಶ್ ಪೆರ್ಗಡೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya
error: Content is protected !!