April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್ ಎಸ್ ಘಟಕ, ಲಯನ್ಸ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಇವುಗಳ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜ.28 ರಂದು ಗುರಿಪಳ್ಳದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.

ಲಕ್ಷ್ಮೀ ಇಂಡಸ್ಟ್ರೀಸ್ ನ ಮಾಲಕ ಮೋಹನ್ ಕುಮಾರ್ ಶಿಬಿರವನ್ನು ಉದ್ಘಾಟಿಸಿದರು. ಶ್ರೀ ದಂತ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ| ಎಂ.ಎಂ ದಯಾಕರ್ ಅಧ್ಯಕ್ಷತೆ ವಹಿಸಿದ್ದರು. ಲಯನ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಲಿಯೋ ಕ್ಲಬ್ ಅಧ್ಯಕ್ಷೆ ಅಪ್ಸರಾ ಎಚ್. ಆರ್. ಗೌಡ, ಕಾರ್ಯದರ್ಶಿ ಅನಂತಕೃಷ್ಣ,ಲಿಯೋ ಕಾರ್ಯದರ್ಶಿ ಸಿ.ಎ.ನಿರೀಕ್ಷಾ ಎನ್ ನಾವರ , ಸಂಘಟಕರಾದ ನಿತ್ಯಾನಂದ ನಾವರ, ಎಚ್. ರಾಮಕೃಷ್ಣ ಗೌಡ, ಡಾ. ದೇವಿ ಪ್ರಸಾದ್ ಬೊಲ್ಮ, ಅಶೋಕ್ ಕುಮಾರ್ ಬಿ.ಪಿ, ಲಿಯೋ ಕ್ಲಬ್ ಸದಸ್ಯರುಗಳಾದ ದೀಕ್ಷಿತ್, ನಿಕ್ಷೇಪ್ ಹಾಗೂ ಇತರ ಲಿಯೋ ಹಾಗೂ ಲಯನ್ಸ್ ಸದಸ್ಯರು ಉಪಸ್ಥಿತರಿದ್ದರು.


ಶಿಬಿರದಲ್ಲಿ ದಂತ ವಿಭಾಗ, ಕಣ್ಣು ಪರೀಕ್ಷೆ, ಕನ್ನಡಕ ವಿತರಣೆ, ಇತರ ಜನರಲ್ ಆರೋಗ್ಯ ತಪಾಸಣೆ ಇತ್ಯಾದಿ ವ್ಯವಸ್ಥೆ ಮಾಡಲಾಗಿತ್ತು. 400ಕ್ಕೂ ಅಧಿಕ ಮಂದಿ ಪ್ರಯೋಜನ ಪಡೆದರು

Related posts

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!