26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಕುಕ್ಕೇಡಿ ಗ್ರಾಮದ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ನಡೆದ ಸ್ಪೋಟದ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು. ದುರ್ಘಟನೆ ಯಿಂದ ಮೂವರು ಕಾರ್ಮಿಕರ ಜೀವ ಹಾನಿಯಾಗಿದ್ದು.ಸ್ಪೋಟದಿಂದ ಹಾನಿಯಾದ ಸಮೀಪದ ಮನೆಗಳಿಗೂ ಭೇಟಿ ನೀಡಿದರು.

ನಂತರ ಮಾತನಾಡಿ ಈಗಾಗಲೇ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಸರಿಸುಮಾರು 24 ಲೈಸೆನ್ಸ್ ತಾಲೂಕಿನಲ್ಲಿ ಇದೆ, ಅದರಲ್ಲಿ ಮೊನ್ನೆ ನಡೆದಂತಹ ಆನೇಕಲ್ಲು ಘಟನೆ ಆದ ಮೇಲೆ ಎಲ್ಲರ ಜಾಗ ಪರಿಶೀಲನೆ ಮಾಡಿದ್ದಾರೆ, ಎಲ್ಲರ ಲೈಸೆನ್ಸ್ ನ್ನು ಕೂಡ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ರು. ಮಾರ್ಚ್ ವರೆಗೆ ಲೈಸೆನ್ಸ್ ಅವಕಾಶ ಇತ್ತು ಎಂಬ ಮಾಹಿತಿಯನ್ನು ಕೊಟ್ಟಿದ್ದಾರೆ. ಎಲ್ಲಾ ತನಿಖಾ ತಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದೆ. ಸುತ್ತಮುತ್ತಲಿನ ಮನೆಗಳಿಗೂ ಭೇಟಿ ಕೊಟ್ಟಿದ್ದೇನೆ, ಹಾನಿಯಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಮಾಡುತ್ತೇನೆ. ಅದರೊಂದಿಗೆ ಮೃತ ಕಾರ್ಮಿಕರಿಗೂ ಕೂಡ ಪರಿಹಾರ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು.

Related posts

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
error: Content is protected !!