23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಕುಕ್ಕೇಡಿ ಗ್ರಾಮದ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ನಡೆದ ಸ್ಪೋಟದ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು. ದುರ್ಘಟನೆ ಯಿಂದ ಮೂವರು ಕಾರ್ಮಿಕರ ಜೀವ ಹಾನಿಯಾಗಿದ್ದು.ಸ್ಪೋಟದಿಂದ ಹಾನಿಯಾದ ಸಮೀಪದ ಮನೆಗಳಿಗೂ ಭೇಟಿ ನೀಡಿದರು.

ನಂತರ ಮಾತನಾಡಿ ಈಗಾಗಲೇ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಸರಿಸುಮಾರು 24 ಲೈಸೆನ್ಸ್ ತಾಲೂಕಿನಲ್ಲಿ ಇದೆ, ಅದರಲ್ಲಿ ಮೊನ್ನೆ ನಡೆದಂತಹ ಆನೇಕಲ್ಲು ಘಟನೆ ಆದ ಮೇಲೆ ಎಲ್ಲರ ಜಾಗ ಪರಿಶೀಲನೆ ಮಾಡಿದ್ದಾರೆ, ಎಲ್ಲರ ಲೈಸೆನ್ಸ್ ನ್ನು ಕೂಡ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ರು. ಮಾರ್ಚ್ ವರೆಗೆ ಲೈಸೆನ್ಸ್ ಅವಕಾಶ ಇತ್ತು ಎಂಬ ಮಾಹಿತಿಯನ್ನು ಕೊಟ್ಟಿದ್ದಾರೆ. ಎಲ್ಲಾ ತನಿಖಾ ತಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದೆ. ಸುತ್ತಮುತ್ತಲಿನ ಮನೆಗಳಿಗೂ ಭೇಟಿ ಕೊಟ್ಟಿದ್ದೇನೆ, ಹಾನಿಯಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಮಾಡುತ್ತೇನೆ. ಅದರೊಂದಿಗೆ ಮೃತ ಕಾರ್ಮಿಕರಿಗೂ ಕೂಡ ಪರಿಹಾರ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು.

Related posts

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!