ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ಸುಲ್ಕೇರಿ : ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾಯತ್ ಸುಲ್ಕೇರಿ ಇದರ ಸಹಭಾಗಿತ್ವದಲ್ಲಿ ಕುದ್ಯಾಡಿ ಗ್ರಾಮದ ಸೀತಾ ಎನ್ ಶೆಟ್ಟಿಯವರ ಮನೆಯಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆಯನ್ನು ಜ.31ರಂದು ಪಂಚಾಯತ್ ಉಪಾಧ್ಯಕ್ಷರಾದ ಶುಭಕರ ಪೂಜಾರಿಯವರು ದೀಪ ಬೆಳಗಿಸಿ ಶುಭಹಾರೈಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಮ್ಯಾನೇಜರ್ ನಿತೇಶ್, ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ಪಂಚಾಯತ್ ಸದಸ್ಯರಾದ ಯಶೋಧ ಎಲ್ ಬಂಗೇರ , ಒಕ್ಕೂಟದ ಅಧ್ಯಕ್ಷರಾದ ಶಶಿಕಲಾ ಹೆಗ್ಡೆ, ಸಂಜೀವಿನಿ ಎಮ್.ಬಿ.ಕೆ ಎಲ್ ಸಿಆರ್ ಪಿ ಕೃಷಿ ಉದ್ಯೋಗ ಸಖಿ ಉತ್ಪಾದಕರ ಸಂಘದ ಅಧ್ಯಕ್ಷೆ ರೇಖಾ, ಕಾರ್ಯದರ್ಶಿ ಪೂರ್ಣಿಮಾ ಹಾಗೂ ಸಂಘದ ಎಲ್ಲಾ ಸಂಜೀವಿನಿ ಸದಸ್ಯರು ಭಾಗವಹಿಸಿದರು.

ಸಂಘದ ಸದಸ್ಯರಾದ ರೇಖಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Leave a Comment

error: Content is protected !!