25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ , ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಮತ್ತು ವಕೀಲರಿಂದ, ವಕೀಲರಿಗಾಗಿ, ವಕೀಲರಿಗೋಸ್ಕರ ನೇರ ಸಂವಾದ ಕಾರ್ಯಕ್ರಮವು ಜ.31 ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಎಂ ಬದರಿನಾಥ ಸಂಪಿಗೆತ್ತಾಯ ಮಾತನಾಡಿ ನ್ಯಾಯಾಲಯದ ಕಾರ್ಯವಿಧಾನಗಳ ಮೂಲಭೂತ ಅಧ್ಯಯನ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ವಕೀಲರು ಹಾಗೂ ಯುವ ವಕೀಲರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿ, ಯುವ ವಕೀಲರ ವೇದಿಕೆಯ ಕೋಶಾಧಿಕಾರಿ ಜಗದೀಶ್ ಧನ್ಯವಾದವಿತ್ತರು.

Related posts

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!