38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ಜ.28 ರಂದು ಶ್ರೀ ಮಾತ ಲಕ್ಷಣಿ ವ್ರದ್ಧಾಶ್ರಮ ಫರಂಗಿಪೇಟೆಯಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ನೆರವು ಕಾರ್ಯಕ್ರಮ-2024 ಆಯೋಜಿಸಿದ್ದರು.

ಅಲ್ಲಿನ ವೃದ್ಧಾಶ್ರಮಕ್ಕೆ 15,000ರೂ ಮೌಲ್ಯದ ಗ್ರೈಂಡರ್ ವಿತರಿಸಿದರು ಹಾಗೂ 3,500ರೂ ಮೌಲ್ಯದ ಡೈಪರ್ ಅನ್ನು ವಿತರಿಸಿದರು.

ನಂತರ ಸಮಾಜದಲ್ಲಿ ತಮ್ಮಂತೆಯೇ ಸಮಾಜಸೇವೆ ಮಾಡುವ ಆಯ್ದ 12 ಸಂಘಸಂಸ್ಥೆಗಳಿಗೆ ಗೌರವರ್ಪಣೆ ಮಾಡಿದರು..

ಈ ಸಂದರ್ಭದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಅರ್ಜುನ್ ಬಂಡರ್ಕಾರ್ , ಸ್ಪೂರ್ತಿ ವಿಶೇಷ ಶಾಲೆಯ ಸ್ಥಾಪಕಾಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್ , ಆಶ್ರಮದ ಸ್ಥಾಪಕಾಧ್ಯಕ್ಷರಾದ ಹರೀಶ್ ಪೆರ್ಗಡೆ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya
error: Content is protected !!