April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

ಬೆಳ್ತಂಗಡಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಇರುವ ಇಳಿಜಾರಾದ ಗುಡ್ಡ ಪ್ರದೇಶದಲ್ಲಿ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ ಯಾಗಿದ್ದು, ಇದು ಆಶ್ರಮದಿಂದ ಕಾಣೆಯಾಗಿದ್ದ ವ್ವಕ್ತಿಯದೆಂದು ಸಂಶಯಿಸಲಾಗಿದೆ.

ಶ್ರೀ ಗುರು ಚೈತನ್ಯ ಸೇವಾಶ್ರಮ , ಗುಂಡೂರಿ ಇದರ ಮೇಲ್ವಿಚಾರಕ ಹೊನ್ನಯ್ಯ ಕಾಟಿಪಳ್ಳ ಅವರು ವೇಣೂರು ಪೊಲೀಸರಿಗೆ ದೂರು ನೀಡಿ, ಜ.30 ರಂದು ಬೆಳಿಗ್ಗೆ ಸುಮಾರು 6.30 ಗಂಟೆಗೆ ತಾನು ನಡೆಸುತ್ತಿರುವ ಬೆಳ್ತಂಗಡಿ ತಾಲೂಕು ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಇರುವ ಇಳಿಜಾರಾದ ಗುಡ್ಡ ಪ್ರದೇಶದಲ್ಲಿ ಯಾವುದೋ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಇರುವುದಾಗಿ ಆಶ್ರಮದ ನೆರೆ ಮನೆಯ ರಮೇಶ್ ಎಂಬವರು ತಿಳಿಸಿದ ಮಾಹಿತಿಯಂತೆ ರಮೇಶ ರವರೊಂದಿಗೆ ಸದ್ರಿ ಗುಡ್ಡ ಜಾಗಕ್ಕೆ ತೆರಳಿ ನೋಡಲಾಗಿ ಅಲ್ಲಲ್ಲಿ ಮಾನವನ ದೇಹದ ಭಾಗಗಳಂತೆ ಕಾಣುವ ತಲೆ ಬುರುಡೆ ಹಾಗೂ ಮೂಳೆಗಳು ಕಂಡುಬಂದಿದೆ. ಅದರ ಪಕ್ಕದಲ್ಲಿ ಒಂದು ಕಂದು ಬಣ್ಣದ ಬರ್ಮುಡ ಚಡ್ಡಿ ಹಾಗೂ ಟೀ-ಶರ್ಟ್‌ ತುಂಡುಗಳು ಬಿದ್ದಿರುವುದು ಪತ್ತೆಯಾಗಿದೆ. ಸದ್ರಿ ಬಟ್ಟೆ ತುಂಡುಗಳು ತನ್ನ ಆಶ್ರಮದಿಂದ ಕಾಣೆಯಾಗಿರುವ ಸುಧಾಕರ ಎಂಬರು ಕಾಣೆಯಾದ ಸಮಯ ಧರಿಸಿದ್ದ ಬಟ್ಟೆಯಂತೆ ಕಂಡುಬರುತ್ತಿದ್ದು, ಸದ್ರಿ ಮಾನವ ದೇಹದ ಅವಶೇಷಗಳು ಸುಧಾಕರನದ್ದೇ ಆಗಿರುವ ಬಗ್ಗೆ ಸಂಶಯವಿರುತ್ತದೆ. ಆದ್ದರಿಂದ ಸುಧಾಕರನು ರಾತ್ರಿ ಸಮಯ ಆಶ್ರಮ ಬಿಟ್ಟು ಹೋಗುವಾಗ ಆತನಿಗಿದ್ದ ಮಾನಸಿಕ ಅಸೌಖ್ಯದಿಂದ ಬಿದ್ದು ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕಾಗಿ ಒತ್ತಾಯಿಸಿದ್ದಾರೆ. ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
error: Content is protected !!