27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

ಬೆಳ್ತಂಗಡಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಇರುವ ಇಳಿಜಾರಾದ ಗುಡ್ಡ ಪ್ರದೇಶದಲ್ಲಿ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ ಯಾಗಿದ್ದು, ಇದು ಆಶ್ರಮದಿಂದ ಕಾಣೆಯಾಗಿದ್ದ ವ್ವಕ್ತಿಯದೆಂದು ಸಂಶಯಿಸಲಾಗಿದೆ.

ಶ್ರೀ ಗುರು ಚೈತನ್ಯ ಸೇವಾಶ್ರಮ , ಗುಂಡೂರಿ ಇದರ ಮೇಲ್ವಿಚಾರಕ ಹೊನ್ನಯ್ಯ ಕಾಟಿಪಳ್ಳ ಅವರು ವೇಣೂರು ಪೊಲೀಸರಿಗೆ ದೂರು ನೀಡಿ, ಜ.30 ರಂದು ಬೆಳಿಗ್ಗೆ ಸುಮಾರು 6.30 ಗಂಟೆಗೆ ತಾನು ನಡೆಸುತ್ತಿರುವ ಬೆಳ್ತಂಗಡಿ ತಾಲೂಕು ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಇರುವ ಇಳಿಜಾರಾದ ಗುಡ್ಡ ಪ್ರದೇಶದಲ್ಲಿ ಯಾವುದೋ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಇರುವುದಾಗಿ ಆಶ್ರಮದ ನೆರೆ ಮನೆಯ ರಮೇಶ್ ಎಂಬವರು ತಿಳಿಸಿದ ಮಾಹಿತಿಯಂತೆ ರಮೇಶ ರವರೊಂದಿಗೆ ಸದ್ರಿ ಗುಡ್ಡ ಜಾಗಕ್ಕೆ ತೆರಳಿ ನೋಡಲಾಗಿ ಅಲ್ಲಲ್ಲಿ ಮಾನವನ ದೇಹದ ಭಾಗಗಳಂತೆ ಕಾಣುವ ತಲೆ ಬುರುಡೆ ಹಾಗೂ ಮೂಳೆಗಳು ಕಂಡುಬಂದಿದೆ. ಅದರ ಪಕ್ಕದಲ್ಲಿ ಒಂದು ಕಂದು ಬಣ್ಣದ ಬರ್ಮುಡ ಚಡ್ಡಿ ಹಾಗೂ ಟೀ-ಶರ್ಟ್‌ ತುಂಡುಗಳು ಬಿದ್ದಿರುವುದು ಪತ್ತೆಯಾಗಿದೆ. ಸದ್ರಿ ಬಟ್ಟೆ ತುಂಡುಗಳು ತನ್ನ ಆಶ್ರಮದಿಂದ ಕಾಣೆಯಾಗಿರುವ ಸುಧಾಕರ ಎಂಬರು ಕಾಣೆಯಾದ ಸಮಯ ಧರಿಸಿದ್ದ ಬಟ್ಟೆಯಂತೆ ಕಂಡುಬರುತ್ತಿದ್ದು, ಸದ್ರಿ ಮಾನವ ದೇಹದ ಅವಶೇಷಗಳು ಸುಧಾಕರನದ್ದೇ ಆಗಿರುವ ಬಗ್ಗೆ ಸಂಶಯವಿರುತ್ತದೆ. ಆದ್ದರಿಂದ ಸುಧಾಕರನು ರಾತ್ರಿ ಸಮಯ ಆಶ್ರಮ ಬಿಟ್ಟು ಹೋಗುವಾಗ ಆತನಿಗಿದ್ದ ಮಾನಸಿಕ ಅಸೌಖ್ಯದಿಂದ ಬಿದ್ದು ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕಾಗಿ ಒತ್ತಾಯಿಸಿದ್ದಾರೆ. ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!