April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ತಣ್ಣೀರುಪಂತ :ತಣ್ಣೀರುಪಂತ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.31ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜೋಸೆಫ್ ವಹಿಸಿದರು.
ಲೆಕ್ಕಪತ್ರವನ್ನು ಆನಂದ್ ಸಭೆಗೆ ಮಂಡಿಸಿದರು.

ಸಭೆಯಲ್ಲಿ ತುರ್ಕಳಿಕೆಯಲ್ಲಿ ಗ್ರಾಮ ಪಂಚಾಯತ್ ನೀಡಿದ ಮನೆ ನಿವೇಶನ ನಿಗದಿಪಡಿಸಿದ ಜಾಗದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಇದೀಗ 28 ಕುಟುಂಬಗಳು ಸರಿಯಾದ ದಾಖಲೆಗಾಗಿ ಆತಂಕ ದಿಂದ ಅಲೆಯು ಸ್ಥಿತಿ ನಿರ್ಮಾಣವಾಗಿದೆ ಎಂದು ಕೆ. ಎಸ್. ಅಬ್ದುಲ ತಿಳಿಸಿದರು.
ಈ ಬಗ್ಗೆ ಪಂಚಾಯತ್ ನಿಂದ ತಪ್ಪಾಗಿದ್ದು ಆದಷ್ಟು ಬೇಗ ಸರಿ ಮಾಡುತ್ತೇವೆ ಎಂದು ಕಂದಾಯ ಇಲಾಖೆಯವರು ತಿಳಿಸಿದರು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ಇಂಜಿನಿಯರ್ ಉಪ ವಿಭಾಗ , ಆರ್ಥಿಕ ಸಾಕ್ಷಾರತಾ ಸಲಹೆಗಾರರು, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿಗ್ರಾ.ಪಂ. ಉಪಾಧ್ಯಕ್ಷೆ ಪ್ರಿಯಾ ಮತ್ತು ಎಲ್ಲಾ ಸದಸ್ಯರು, ಅಭಿವೃದ್ದಿ ಅಧಿಕಾರಿ ಶ್ರವಣ್ ಕುಮಾರ್ ಹಾಗೂ ಗ್ರಾಮಸ್ಥರು, ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.


Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!