25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ತಣ್ಣೀರುಪಂತ :ತಣ್ಣೀರುಪಂತ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.31ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜೋಸೆಫ್ ವಹಿಸಿದರು.
ಲೆಕ್ಕಪತ್ರವನ್ನು ಆನಂದ್ ಸಭೆಗೆ ಮಂಡಿಸಿದರು.

ಸಭೆಯಲ್ಲಿ ತುರ್ಕಳಿಕೆಯಲ್ಲಿ ಗ್ರಾಮ ಪಂಚಾಯತ್ ನೀಡಿದ ಮನೆ ನಿವೇಶನ ನಿಗದಿಪಡಿಸಿದ ಜಾಗದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಇದೀಗ 28 ಕುಟುಂಬಗಳು ಸರಿಯಾದ ದಾಖಲೆಗಾಗಿ ಆತಂಕ ದಿಂದ ಅಲೆಯು ಸ್ಥಿತಿ ನಿರ್ಮಾಣವಾಗಿದೆ ಎಂದು ಕೆ. ಎಸ್. ಅಬ್ದುಲ ತಿಳಿಸಿದರು.
ಈ ಬಗ್ಗೆ ಪಂಚಾಯತ್ ನಿಂದ ತಪ್ಪಾಗಿದ್ದು ಆದಷ್ಟು ಬೇಗ ಸರಿ ಮಾಡುತ್ತೇವೆ ಎಂದು ಕಂದಾಯ ಇಲಾಖೆಯವರು ತಿಳಿಸಿದರು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ಇಂಜಿನಿಯರ್ ಉಪ ವಿಭಾಗ , ಆರ್ಥಿಕ ಸಾಕ್ಷಾರತಾ ಸಲಹೆಗಾರರು, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿಗ್ರಾ.ಪಂ. ಉಪಾಧ್ಯಕ್ಷೆ ಪ್ರಿಯಾ ಮತ್ತು ಎಲ್ಲಾ ಸದಸ್ಯರು, ಅಭಿವೃದ್ದಿ ಅಧಿಕಾರಿ ಶ್ರವಣ್ ಕುಮಾರ್ ಹಾಗೂ ಗ್ರಾಮಸ್ಥರು, ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.


Related posts

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!