22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ತಣ್ಣೀರುಪಂತ :ತಣ್ಣೀರುಪಂತ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.31ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜೋಸೆಫ್ ವಹಿಸಿದರು.
ಲೆಕ್ಕಪತ್ರವನ್ನು ಆನಂದ್ ಸಭೆಗೆ ಮಂಡಿಸಿದರು.

ಸಭೆಯಲ್ಲಿ ತುರ್ಕಳಿಕೆಯಲ್ಲಿ ಗ್ರಾಮ ಪಂಚಾಯತ್ ನೀಡಿದ ಮನೆ ನಿವೇಶನ ನಿಗದಿಪಡಿಸಿದ ಜಾಗದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಇದೀಗ 28 ಕುಟುಂಬಗಳು ಸರಿಯಾದ ದಾಖಲೆಗಾಗಿ ಆತಂಕ ದಿಂದ ಅಲೆಯು ಸ್ಥಿತಿ ನಿರ್ಮಾಣವಾಗಿದೆ ಎಂದು ಕೆ. ಎಸ್. ಅಬ್ದುಲ ತಿಳಿಸಿದರು.
ಈ ಬಗ್ಗೆ ಪಂಚಾಯತ್ ನಿಂದ ತಪ್ಪಾಗಿದ್ದು ಆದಷ್ಟು ಬೇಗ ಸರಿ ಮಾಡುತ್ತೇವೆ ಎಂದು ಕಂದಾಯ ಇಲಾಖೆಯವರು ತಿಳಿಸಿದರು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ಇಂಜಿನಿಯರ್ ಉಪ ವಿಭಾಗ , ಆರ್ಥಿಕ ಸಾಕ್ಷಾರತಾ ಸಲಹೆಗಾರರು, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿಗ್ರಾ.ಪಂ. ಉಪಾಧ್ಯಕ್ಷೆ ಪ್ರಿಯಾ ಮತ್ತು ಎಲ್ಲಾ ಸದಸ್ಯರು, ಅಭಿವೃದ್ದಿ ಅಧಿಕಾರಿ ಶ್ರವಣ್ ಕುಮಾರ್ ಹಾಗೂ ಗ್ರಾಮಸ್ಥರು, ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.


Related posts

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!