July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಕುಕ್ಕೇಡಿ ಗ್ರಾಮದ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ನಡೆದ ಸ್ಪೋಟದ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು. ದುರ್ಘಟನೆ ಯಿಂದ ಮೂವರು ಕಾರ್ಮಿಕರ ಜೀವ ಹಾನಿಯಾಗಿದ್ದು.ಸ್ಪೋಟದಿಂದ ಹಾನಿಯಾದ ಸಮೀಪದ ಮನೆಗಳಿಗೂ ಭೇಟಿ ನೀಡಿದರು.

ನಂತರ ಮಾತನಾಡಿ ಈಗಾಗಲೇ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಸರಿಸುಮಾರು 24 ಲೈಸೆನ್ಸ್ ತಾಲೂಕಿನಲ್ಲಿ ಇದೆ, ಅದರಲ್ಲಿ ಮೊನ್ನೆ ನಡೆದಂತಹ ಆನೇಕಲ್ಲು ಘಟನೆ ಆದ ಮೇಲೆ ಎಲ್ಲರ ಜಾಗ ಪರಿಶೀಲನೆ ಮಾಡಿದ್ದಾರೆ, ಎಲ್ಲರ ಲೈಸೆನ್ಸ್ ನ್ನು ಕೂಡ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ರು. ಮಾರ್ಚ್ ವರೆಗೆ ಲೈಸೆನ್ಸ್ ಅವಕಾಶ ಇತ್ತು ಎಂಬ ಮಾಹಿತಿಯನ್ನು ಕೊಟ್ಟಿದ್ದಾರೆ. ಎಲ್ಲಾ ತನಿಖಾ ತಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದೆ. ಸುತ್ತಮುತ್ತಲಿನ ಮನೆಗಳಿಗೂ ಭೇಟಿ ಕೊಟ್ಟಿದ್ದೇನೆ, ಹಾನಿಯಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಮಾಡುತ್ತೇನೆ. ಅದರೊಂದಿಗೆ ಮೃತ ಕಾರ್ಮಿಕರಿಗೂ ಕೂಡ ಪರಿಹಾರ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು.

Related posts

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya
error: Content is protected !!