25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

ಕನ್ಯಾಡಿ: ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಅಯೋಧ್ಯಾ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ಸವಿನೆನಪಿಗಾಗಿ ಶ್ರೀ ರಾಮೋತ್ಸವ 2024 ಜ. 27 ರಂದು ನೇರೊಳ್ ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಿತು. ಇದರ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಪ್ರಕಾಶ್ ಭಟ್ ಸುರ್ಯ ಇವರ ಪೌರೋಹಿತ್ಯದಲ್ಲಿ ನೆರವೇರಿತು.

ಕುಣಿತ ಭಜನಾ ಕಾರ್ಯಕ್ರಮವನ್ನು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸುಳ್ಯೊಡಿ ನಾವೂರು, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಂದ್ಕೂರು, ಶ್ರೀ ನರಸಿಂಹ ಭಜನಾ ಮಂಡಳಿ ನಡ ಮತ್ತು ಶ್ರೀ ಬ್ರಹ್ಮದೇವ ಭಜನಾ ಮಂಡಳಿ ಅರಳಿ ನೆರವೇರಿಸಿದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸವನ್ನು ರಾಮ್ ಕುಮಾರ್ ಮರ್ನಾಡ್ ನೀಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ ರಾಮ ಗೆಳೆಯರ ಬಳಗದ ಅಧ್ಯಕ್ಷ ಯೋಗೀಶ್ ಬಿ ಆರ್, ಶಾಸಕ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು, ಜಯಂತ್ ಗೌಡ, ಹರೀಶ್ ಮೋರ್ತಾಜೆ, ಅಜಿತ್ ಅರಿಗ, ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಶಶಿಕಾಂತ್ ಬೀಮಂಡೆ ಸ್ವಾಗತಿಸಿದರು. ಜಗದೀಶ್ ಕೊಡಿಕ್ಕು ಧನ್ಯವಾದವಿತ್ತರು.

Related posts

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya
error: Content is protected !!