22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಸಂಸತ್ತಿನಲ್ಲಿ ಫೆ.1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್, ನರೇಂದ್ರ ಮೋದಿ ನೇತೃತ್ವದ 2ನೇ ಅವಧಿಯ ಕೊನೆಯ ಮುಂಗಡ ಪತ್ರವನ್ನು ಮಂಡಿಸಿದ್ದು ವಿಕಸಿತ ಭಾರತ 2047 ನ್ನು ದೂರದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಮುಂಗಡ ಪತ್ರವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತ ಪಡಿಸಿದ್ದಾರೆ.

ದೇಶದ 1 ಕೋಟಿ ಮನೆಗಳ ಮಾಳಿಗೆ ಮೇಲೆ ಸೋಲಾರ್ ಅಳವಡಿಕೆ ಯೋಜನೆಯಿಂದ ಮುಂದಿನ ದಿನಗಳಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ರಾಷ್ಟ್ರ ಸ್ವಾವಲಂಬಿಯಾಗುವುದು ಮಾತ್ರವಲ್ಲದೆ, ಹೆಚ್ಚುವರಿ ವಿದ್ಯುತ್‌ ನ್ನು ಮಾರಾಟ ಮಾಡುವ ಅವಕಾಶದಿಂದ ಜನತೆಯಲ್ಲಿ ಜೀವನ ಮಟ್ಟ ಹಾಗೂ ಉದ್ಯೋಗ ಸೃಷ್ಟಿಯಾಗಲಿದೆ. ಆತ್ಮನಿರ್ಭರ ಆಯಿಲ್ ಸೀಡ್ ಯೋಜನೆಯಿಂದ ಜನತೆಗೆ ಅಡುಗೆ ತೈಲದ ಬೆಲೆಯೇರಿಕೆಯ ಬಿಸಿಯಿಂದ ಮುಕ್ತಿ ದೊರಕಲಿದೆ.

3 ಕೋಟಿ ಮನೆಗಳ ಗುರಿ, ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ 55 ಲಕ್ಷ ಉದ್ಯೋಗ ಸೃಷ್ಟಿ, ರೈಲ್ವೇ ಇಲಾಖೆಯಲ್ಲಿ ವಂದೇ ಭಾರತ್ ಯೋಜನೆಗೆ ಉತ್ತೇಜನ, ರಸ್ತೆ, ರೈಲು ವಿಮಾನಯಾನಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆ ವಿಸ್ತರಣೆ, ಪ್ರವಾಸೋದ್ಯಮ ಹಾಗೂ ಕೃಷಿಗೆ ವೈಜ್ಞಾನಿಕ ಸ್ಪರ್ಶ ನಿಶ್ಚಿತವಾಗಿಯೂ ಸರ್ವಾಂಗೀಣ ಪ್ರಗತಿಯತ್ತ ದೇಶ ಮುನ್ನಡೆಯಲಿದೆ. ಯಾವುದೇ ಪೊಳ್ಳು ಭರವಸೆ ನೀಡದೆ ಕಳೆದ 10 ವರ್ಷಗಳಲ್ಲಿ ರಾಷ್ಟ್ರದ ಅಭ್ಯುದಯಕ್ಕೆ ಉತ್ತಮ ಕಾರ್ಯ ನಿರ್ವಹಿಸಿ, ನುಡಿದಂತೆ ನಡೆದ ಮೋದಿ ಸರ್ಕಾರ ವಿಕಸಿತ ಭಾರತಕ್ಕೆ ಜನತೆಗೆ ವಿಶ್ವಾಸಾರ್ಹ ಮುಂಗಡ ಪತ್ರವನ್ನು ನೀಡಿದೆಯೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya
error: Content is protected !!