ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಕನ್ಯಾಡಿ: ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಅಯೋಧ್ಯಾ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ಸವಿನೆನಪಿಗಾಗಿ ಶ್ರೀ ರಾಮೋತ್ಸವ 2024 ಜ. 27 ರಂದು ನೇರೊಳ್ ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಿತು. ಇದರ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಪ್ರಕಾಶ್ ಭಟ್ ಸುರ್ಯ ಇವರ ಪೌರೋಹಿತ್ಯದಲ್ಲಿ ನೆರವೇರಿತು.

ಕುಣಿತ ಭಜನಾ ಕಾರ್ಯಕ್ರಮವನ್ನು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸುಳ್ಯೊಡಿ ನಾವೂರು, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಂದ್ಕೂರು, ಶ್ರೀ ನರಸಿಂಹ ಭಜನಾ ಮಂಡಳಿ ನಡ ಮತ್ತು ಶ್ರೀ ಬ್ರಹ್ಮದೇವ ಭಜನಾ ಮಂಡಳಿ ಅರಳಿ ನೆರವೇರಿಸಿದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸವನ್ನು ರಾಮ್ ಕುಮಾರ್ ಮರ್ನಾಡ್ ನೀಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ ರಾಮ ಗೆಳೆಯರ ಬಳಗದ ಅಧ್ಯಕ್ಷ ಯೋಗೀಶ್ ಬಿ ಆರ್, ಶಾಸಕ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು, ಜಯಂತ್ ಗೌಡ, ಹರೀಶ್ ಮೋರ್ತಾಜೆ, ಅಜಿತ್ ಅರಿಗ, ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಶಶಿಕಾಂತ್ ಬೀಮಂಡೆ ಸ್ವಾಗತಿಸಿದರು. ಜಗದೀಶ್ ಕೊಡಿಕ್ಕು ಧನ್ಯವಾದವಿತ್ತರು.

Leave a Comment

error: Content is protected !!