23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

ಕನ್ಯಾಡಿ: ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಅಯೋಧ್ಯಾ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ಸವಿನೆನಪಿಗಾಗಿ ಶ್ರೀ ರಾಮೋತ್ಸವ 2024 ಜ. 27 ರಂದು ನೇರೊಳ್ ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಿತು. ಇದರ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಪ್ರಕಾಶ್ ಭಟ್ ಸುರ್ಯ ಇವರ ಪೌರೋಹಿತ್ಯದಲ್ಲಿ ನೆರವೇರಿತು.

ಕುಣಿತ ಭಜನಾ ಕಾರ್ಯಕ್ರಮವನ್ನು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸುಳ್ಯೊಡಿ ನಾವೂರು, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಂದ್ಕೂರು, ಶ್ರೀ ನರಸಿಂಹ ಭಜನಾ ಮಂಡಳಿ ನಡ ಮತ್ತು ಶ್ರೀ ಬ್ರಹ್ಮದೇವ ಭಜನಾ ಮಂಡಳಿ ಅರಳಿ ನೆರವೇರಿಸಿದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸವನ್ನು ರಾಮ್ ಕುಮಾರ್ ಮರ್ನಾಡ್ ನೀಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ ರಾಮ ಗೆಳೆಯರ ಬಳಗದ ಅಧ್ಯಕ್ಷ ಯೋಗೀಶ್ ಬಿ ಆರ್, ಶಾಸಕ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು, ಜಯಂತ್ ಗೌಡ, ಹರೀಶ್ ಮೋರ್ತಾಜೆ, ಅಜಿತ್ ಅರಿಗ, ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಶಶಿಕಾಂತ್ ಬೀಮಂಡೆ ಸ್ವಾಗತಿಸಿದರು. ಜಗದೀಶ್ ಕೊಡಿಕ್ಕು ಧನ್ಯವಾದವಿತ್ತರು.

Related posts

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!