July 23, 2026
Uncategorized

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಜ.30 ರಂದು ಆಚರಿಸಲಾಯಿತು.

ಮಡಂತ್ಯಾರು ಗ್ರಾ ಪಂ ಅಧ್ಯಕ್ಷೆ ರೂಪ ಎ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ‌ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪಡೆದ ಹರೇಕಳ ಹಾಜಬ್ಬ ಅಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅತಿಥಿಗಳಾಗಿ ಉಪಾಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ವಿಶ್ವನಾಥ ಪೂಜಾರಿ, ಕಿಶೋರ್ ಕುಮಾರ್, ಪ್ರಗತಿಪರ‌ ಕೃಷಿಕ ಪ್ರಭಾಕರ್, ಬಂಗೇಕಟ್ಟೆ ಮಸೀದಿಯ ಮುಖ್ಯಸ್ಥರಾದ ಯಂ ಆರ್ ಹೈದರ್, ಜೇಸಿಐ ಮಡಂತ್ಯಾರು ಇದರ ಉಪಾಧ್ಯಕ್ಷೆ ಅಮಿತಾ ಬಂಡಾರಿ, ಗ್ರಾಮ ಪಂ ಸಿಬಂದಿ ಪ್ರಮೀಳಾ, ಸಮುದಾಯ ಆರೋಗ್ಯ ಕಾರ್ಯಕರ್ತೆ ಜೆಸ್ಸಿ ಫೆರ್ನಾಂಡಿಸ್, ಆಶಾ ಕಾರ್ಯಕರ್ತೆ ಜಾನಕಿ, ಹೇಮಾವತಿ, ಸುನಂದ ಉಪಸ್ಥಿತರಿದ್ದರು.

ಹನೀಫ್ ಸಾಲುಮರ, ಜಯಂತಿ ಹಾರಬೆ, ಹಕೀಂ ಬಂಗೇರಕಟ್ಟೆ, ಬಿಗ್ ಬ್ರದರ್ಸ ಸಾಲುಮರ ದಾನಿಗಳಾಗಿ ಸಹಕಾರ ನೀಡಿದರು. ಹೇಮಾವತಿ ಶೆಟ್ಟಿ, ಶ್ಯಾಮಲ ಹೆಗ್ಡೆ, ಸ್ತ್ರೀಶಕ್ತಿ ಸದಸ್ಯರು,ಮಕ್ಕಳ ಹೆತ್ತವರು ಅಂಗನವಾಡಿ ಸಹಾಯಕಿ ಊರಿನ ಯುವಕರು ಕಾರ್ಯಕ್ರಮದ ಯಶಶ್ವಿಗೆ ಸಹಕರಿಸಿದರು. ಇರ್ಪಾನ್ ಸಾಲುಮರ ಕಾರ್ಯಕ್ರಮ ನಿರೂಪಿಸಿದರು. ಸಮೀಮಾ ಸ್ವಾಗತಿಸಿ, ಸಂದ್ಯಾ ಧನ್ಯವಾದವಿತ್ತರು.

Related posts

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya
error: Content is protected !!