22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

ನಾರಾವಿ: ನಾರಾವಿ ಗ್ರಾಮದ ಭ| 1008 ಶ್ರೀ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಮಾರ್ಚ್ 22, 23, 24 ರಂದು ನಡೆಯಲಿರುವುದು. ಈ ಸುಸಂದರ್ಭದ ಪ್ರಯುಕ್ತ ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಸ್ಪರ್ಧೆಗಳ ವಿವರ ಮತ್ತು ನಿಯಮಗಳು ಈ ಕೆಳಗಿನಂತಿದೆ.
1. ಧರ್ಮನಾಥ ಜಿನ ಸಂಗೀತ ಸ್ಪರ್ಧೆ
ಪ್ರಥಮ ಬಹುಮಾನ : 10000 ನಗದು ಮತ್ತು ಸ್ಮರಣಿಕೆ
ದ್ವಿತೀಯ ಬಹುಮಾನ: 8000 ನಗದು ಮತ್ತು ಸ್ಮರಣಿಕೆ
ನಿಯಮಗಳು: ಧರ್ಮನಾಥ ಸ್ವಾಮಿಯ ಹಾಡು / ಭಜನೆಯನ್ನು ಒಬ್ಬರೇ ಹಾಡಿ, ವಿಡಿಯೋ ಮಾಡಿ ಕಳುಹಿಸಬೇಕು. ಸಾಹಿತ್ಯ, ಸ್ವರ, ಹಿನ್ನಲೆ ಸಂಗೀತ, ಛಾಯಾಗ್ರಹಣ ಇತ್ಯಾದಿ ಅಂಶಗಳನ್ನು ಪರಿಗಣಿಸಿ ವಿಜೇತರನ್ನು ಆಯ್ಕೆ ಮಾಡಲಾಗುವುದು., ನೀವು ಕಳುಹಿಸಿದ ಹಾಡು / ಭಜನೆ ಮತ್ತು ಅದರ ವಿಡಿಯೋ ಈ ಹಿಂದೆ ಎಲ್ಲಿಯೂ ಪ್ರಕಟಗೊಂಡಿರಬಾರದು. ವಿಡಿಯೋದ ಸಮಯ ಕನಿಷ್ಠ 5 ನಿಮಿಷ, ಗರಿಷ್ಠ 8 ನಿಮಿಷಗಳಾಗಿರಬೇಕು.

2. ಪ್ರಬಂಧ ಸ್ಪರ್ಧೆ
ಪ್ರಥಮ ಬಹುಮಾನ: 3000 ನಗದು ಮತ್ತು ಸ್ಮರಣಿಕೆ
ದ್ವಿತೀಯ ಬಹುಮಾನ: 2000 ನಗದು ಮತ್ತು ಸ್ಮರಣಿಕೆ
ನಿಯಮಗಳು: ಪ್ರಬಂಧದ ವಿಷಯ: ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ
ಪ್ರಬಂಧವು 900 ಶಬ್ದಗಳನ್ನು ಮೀರಿರಬಾರದು. ಪ್ರಬಂಧವನ್ನು ಕನ್ನಡ ನುಡಿಯಲ್ಲಿ ಟೈಪ್ ಮಾಡಿ ಪಿಡಿಎಫ್ ಮಾಡಿ ಕಳುಹಿಸತಕ್ಕದು.
ವಿಶೇಷ ಸೂಚನೆ:
1. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 5
2.ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
3. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸುವವರು ತಮ್ಮ ಫೋಟೋ, ವಿಳಾಸ ಮತ್ತು ಮೊಬೈಲ್ ನಂಬರ್‌ಗಳನ್ನು ಜೊತೆಗೆ ಕಳುಹಿಸಬೇಕು.


ವಿಡಿಯೋ ಮತ್ತು ಪ್ರಬಂಧಗಳನ್ನು [email protected] ಗೆ ಮೇಲ್ ಮಾಡಬಹುದು ಅಥವಾ 9481016887 ವಾಟ್ಸಪ್ ನಂಬರ್‌ಗೆ ಕಳುಹಿಸಬೇಕಾಗಿ ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಅತುಲ್ ಎಸ್. ಸೇಮಿತ – 9481016887, ಜ್ಞಾನೇಂದ್ರ ಕುಮಾರ್ ಜೈನ್ – 9902799196

Related posts

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya
error: Content is protected !!