25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

ನಾರಾವಿ: ನಾರಾವಿ ಗ್ರಾಮದ ಭ| 1008 ಶ್ರೀ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಮಾರ್ಚ್ 22, 23, 24 ರಂದು ನಡೆಯಲಿರುವುದು. ಈ ಸುಸಂದರ್ಭದ ಪ್ರಯುಕ್ತ ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಸ್ಪರ್ಧೆಗಳ ವಿವರ ಮತ್ತು ನಿಯಮಗಳು ಈ ಕೆಳಗಿನಂತಿದೆ.
1. ಧರ್ಮನಾಥ ಜಿನ ಸಂಗೀತ ಸ್ಪರ್ಧೆ
ಪ್ರಥಮ ಬಹುಮಾನ : 10000 ನಗದು ಮತ್ತು ಸ್ಮರಣಿಕೆ
ದ್ವಿತೀಯ ಬಹುಮಾನ: 8000 ನಗದು ಮತ್ತು ಸ್ಮರಣಿಕೆ
ನಿಯಮಗಳು: ಧರ್ಮನಾಥ ಸ್ವಾಮಿಯ ಹಾಡು / ಭಜನೆಯನ್ನು ಒಬ್ಬರೇ ಹಾಡಿ, ವಿಡಿಯೋ ಮಾಡಿ ಕಳುಹಿಸಬೇಕು. ಸಾಹಿತ್ಯ, ಸ್ವರ, ಹಿನ್ನಲೆ ಸಂಗೀತ, ಛಾಯಾಗ್ರಹಣ ಇತ್ಯಾದಿ ಅಂಶಗಳನ್ನು ಪರಿಗಣಿಸಿ ವಿಜೇತರನ್ನು ಆಯ್ಕೆ ಮಾಡಲಾಗುವುದು., ನೀವು ಕಳುಹಿಸಿದ ಹಾಡು / ಭಜನೆ ಮತ್ತು ಅದರ ವಿಡಿಯೋ ಈ ಹಿಂದೆ ಎಲ್ಲಿಯೂ ಪ್ರಕಟಗೊಂಡಿರಬಾರದು. ವಿಡಿಯೋದ ಸಮಯ ಕನಿಷ್ಠ 5 ನಿಮಿಷ, ಗರಿಷ್ಠ 8 ನಿಮಿಷಗಳಾಗಿರಬೇಕು.

2. ಪ್ರಬಂಧ ಸ್ಪರ್ಧೆ
ಪ್ರಥಮ ಬಹುಮಾನ: 3000 ನಗದು ಮತ್ತು ಸ್ಮರಣಿಕೆ
ದ್ವಿತೀಯ ಬಹುಮಾನ: 2000 ನಗದು ಮತ್ತು ಸ್ಮರಣಿಕೆ
ನಿಯಮಗಳು: ಪ್ರಬಂಧದ ವಿಷಯ: ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ
ಪ್ರಬಂಧವು 900 ಶಬ್ದಗಳನ್ನು ಮೀರಿರಬಾರದು. ಪ್ರಬಂಧವನ್ನು ಕನ್ನಡ ನುಡಿಯಲ್ಲಿ ಟೈಪ್ ಮಾಡಿ ಪಿಡಿಎಫ್ ಮಾಡಿ ಕಳುಹಿಸತಕ್ಕದು.
ವಿಶೇಷ ಸೂಚನೆ:
1. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 5
2.ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
3. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸುವವರು ತಮ್ಮ ಫೋಟೋ, ವಿಳಾಸ ಮತ್ತು ಮೊಬೈಲ್ ನಂಬರ್‌ಗಳನ್ನು ಜೊತೆಗೆ ಕಳುಹಿಸಬೇಕು.


ವಿಡಿಯೋ ಮತ್ತು ಪ್ರಬಂಧಗಳನ್ನು [email protected] ಗೆ ಮೇಲ್ ಮಾಡಬಹುದು ಅಥವಾ 9481016887 ವಾಟ್ಸಪ್ ನಂಬರ್‌ಗೆ ಕಳುಹಿಸಬೇಕಾಗಿ ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಅತುಲ್ ಎಸ್. ಸೇಮಿತ – 9481016887, ಜ್ಞಾನೇಂದ್ರ ಕುಮಾರ್ ಜೈನ್ – 9902799196

Related posts

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya
error: Content is protected !!