September 6, 2026
Uncategorized

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

ನಾರಾವಿ: ನಾರಾವಿ ಗ್ರಾಮದ ಭ| 1008 ಶ್ರೀ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಮಾರ್ಚ್ 22, 23, 24 ರಂದು ನಡೆಯಲಿರುವುದು. ಈ ಸುಸಂದರ್ಭದ ಪ್ರಯುಕ್ತ ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಸ್ಪರ್ಧೆಗಳ ವಿವರ ಮತ್ತು ನಿಯಮಗಳು ಈ ಕೆಳಗಿನಂತಿದೆ.
1. ಧರ್ಮನಾಥ ಜಿನ ಸಂಗೀತ ಸ್ಪರ್ಧೆ
ಪ್ರಥಮ ಬಹುಮಾನ : 10000 ನಗದು ಮತ್ತು ಸ್ಮರಣಿಕೆ
ದ್ವಿತೀಯ ಬಹುಮಾನ: 8000 ನಗದು ಮತ್ತು ಸ್ಮರಣಿಕೆ
ನಿಯಮಗಳು: ಧರ್ಮನಾಥ ಸ್ವಾಮಿಯ ಹಾಡು / ಭಜನೆಯನ್ನು ಒಬ್ಬರೇ ಹಾಡಿ, ವಿಡಿಯೋ ಮಾಡಿ ಕಳುಹಿಸಬೇಕು. ಸಾಹಿತ್ಯ, ಸ್ವರ, ಹಿನ್ನಲೆ ಸಂಗೀತ, ಛಾಯಾಗ್ರಹಣ ಇತ್ಯಾದಿ ಅಂಶಗಳನ್ನು ಪರಿಗಣಿಸಿ ವಿಜೇತರನ್ನು ಆಯ್ಕೆ ಮಾಡಲಾಗುವುದು., ನೀವು ಕಳುಹಿಸಿದ ಹಾಡು / ಭಜನೆ ಮತ್ತು ಅದರ ವಿಡಿಯೋ ಈ ಹಿಂದೆ ಎಲ್ಲಿಯೂ ಪ್ರಕಟಗೊಂಡಿರಬಾರದು. ವಿಡಿಯೋದ ಸಮಯ ಕನಿಷ್ಠ 5 ನಿಮಿಷ, ಗರಿಷ್ಠ 8 ನಿಮಿಷಗಳಾಗಿರಬೇಕು.

2. ಪ್ರಬಂಧ ಸ್ಪರ್ಧೆ
ಪ್ರಥಮ ಬಹುಮಾನ: 3000 ನಗದು ಮತ್ತು ಸ್ಮರಣಿಕೆ
ದ್ವಿತೀಯ ಬಹುಮಾನ: 2000 ನಗದು ಮತ್ತು ಸ್ಮರಣಿಕೆ
ನಿಯಮಗಳು: ಪ್ರಬಂಧದ ವಿಷಯ: ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ
ಪ್ರಬಂಧವು 900 ಶಬ್ದಗಳನ್ನು ಮೀರಿರಬಾರದು. ಪ್ರಬಂಧವನ್ನು ಕನ್ನಡ ನುಡಿಯಲ್ಲಿ ಟೈಪ್ ಮಾಡಿ ಪಿಡಿಎಫ್ ಮಾಡಿ ಕಳುಹಿಸತಕ್ಕದು.
ವಿಶೇಷ ಸೂಚನೆ:
1. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 5
2.ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
3. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸುವವರು ತಮ್ಮ ಫೋಟೋ, ವಿಳಾಸ ಮತ್ತು ಮೊಬೈಲ್ ನಂಬರ್‌ಗಳನ್ನು ಜೊತೆಗೆ ಕಳುಹಿಸಬೇಕು.


ವಿಡಿಯೋ ಮತ್ತು ಪ್ರಬಂಧಗಳನ್ನು [email protected] ಗೆ ಮೇಲ್ ಮಾಡಬಹುದು ಅಥವಾ 9481016887 ವಾಟ್ಸಪ್ ನಂಬರ್‌ಗೆ ಕಳುಹಿಸಬೇಕಾಗಿ ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಅತುಲ್ ಎಸ್. ಸೇಮಿತ – 9481016887, ಜ್ಞಾನೇಂದ್ರ ಕುಮಾರ್ ಜೈನ್ – 9902799196

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya
error: Content is protected !!