23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

ವೇಣೂರು: ಭಗವಾನ್ ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕ ಫೆ 22 ರಿಂದ ಮಾ 1ರವರೆಗೆ ನಡೆಯಲಿದ್ದು ಆಹಾರ ತಯಾರಿಕೆ ಸ್ಥಳದಲ್ಲಿ ಚಪ್ಪರ ಮುಹೂರ್ತವು ಮೂಡಬಿದ್ರೆ ಜೈನ‌ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ಫೆ.1 ರಂದು ನಡೆಯಿತು.

ಬೆಟ್ಟದ ಪುರೋಹಿತರಾದ ಚಂದ್ರನಾಥ ಇಂದ್ರ ರವರು ಪೌರೋಹಿತ್ಯದಲ್ಲಿ ಚಪ್ಪರ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಪ್ರಧಾನ ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ,ಕೋಶಾಧಿಕಾರಿ ಜಯರಾಜ್ ಕಂಬಳಿ, ಪ್ರಮುಖರಾದ ಪ್ರವೀಣ್ ಅಜ್ರಿ,ಮಹಾವೀರ್ ಮೂಡುಕೋಡಿ, ಚಂದ್ರಪ್ರಭ ಜೈನ್, ನವೀನ್ ಚಂದ್ ಬಳ್ಳಾಳ್, ಹಂಡೇಲು ಧನಕೀರ್ತಿ ಬಲಿಪ,ಭರತ್ ರಾಜ್ ಅಜ್ರಿ, ಶಂಭಾಷಿನಿ, ಅಶ್ವಿನಿ ಪ್ರವೀಣ್ ಕುಮಾರ್, ನಿತಿನ್ ಬೊಳ್ಜಾಲು, ವೃಷಭರಾಜ ಅಜ್ರಿ,ಹರ್ಷೇಂದ್ರ ಕುಮಾರ್, ಶರ್ಮಿತ್ ಕುಮಾರ್,ವೈ ಜಯರಾಜ್, ಶಶಿಧರ ಕತ್ತೋಡಿ, ಬ್ರಾಹ್ಮಿ ಮಹಿಳಾ ಸಂಘದ ಸದಸ್ಯರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ರಾಮಕೃಷ್ಣ ಭಟ್ ಇವರ ನೇತೃತ್ವದಲ್ಲಿ ಮೂಡಬಿದ್ರೆ ಆರ್.ಕೆ ಎಂಟರ್ಪ್ರೈಸಸ್ ಮತ್ತು ಎಂ.ಎಂ.ಸಿ ಕಾರ್ಕಳ ಪೆಂಡಲ್ ನಿರ್ಮಾಣ ಕೆಲಸ ನಡೆಯುತ್ತಿದೆ.ಪಾಕ‌ ವ್ಯವಸ್ಥೆಗೆ ರಾಜೇಂದ್ರ ಜೈನ್ ಶಿರ್ತಾಡಿ ವ್ಯವಸ್ಥೆ ಕಲ್ಪಿಸಲಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!