25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

ವೇಣೂರು: ಭಗವಾನ್ ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕ ಫೆ 22 ರಿಂದ ಮಾ 1ರವರೆಗೆ ನಡೆಯಲಿದ್ದು ಆಹಾರ ತಯಾರಿಕೆ ಸ್ಥಳದಲ್ಲಿ ಚಪ್ಪರ ಮುಹೂರ್ತವು ಮೂಡಬಿದ್ರೆ ಜೈನ‌ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ಫೆ.1 ರಂದು ನಡೆಯಿತು.

ಬೆಟ್ಟದ ಪುರೋಹಿತರಾದ ಚಂದ್ರನಾಥ ಇಂದ್ರ ರವರು ಪೌರೋಹಿತ್ಯದಲ್ಲಿ ಚಪ್ಪರ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಪ್ರಧಾನ ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ,ಕೋಶಾಧಿಕಾರಿ ಜಯರಾಜ್ ಕಂಬಳಿ, ಪ್ರಮುಖರಾದ ಪ್ರವೀಣ್ ಅಜ್ರಿ,ಮಹಾವೀರ್ ಮೂಡುಕೋಡಿ, ಚಂದ್ರಪ್ರಭ ಜೈನ್, ನವೀನ್ ಚಂದ್ ಬಳ್ಳಾಳ್, ಹಂಡೇಲು ಧನಕೀರ್ತಿ ಬಲಿಪ,ಭರತ್ ರಾಜ್ ಅಜ್ರಿ, ಶಂಭಾಷಿನಿ, ಅಶ್ವಿನಿ ಪ್ರವೀಣ್ ಕುಮಾರ್, ನಿತಿನ್ ಬೊಳ್ಜಾಲು, ವೃಷಭರಾಜ ಅಜ್ರಿ,ಹರ್ಷೇಂದ್ರ ಕುಮಾರ್, ಶರ್ಮಿತ್ ಕುಮಾರ್,ವೈ ಜಯರಾಜ್, ಶಶಿಧರ ಕತ್ತೋಡಿ, ಬ್ರಾಹ್ಮಿ ಮಹಿಳಾ ಸಂಘದ ಸದಸ್ಯರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ರಾಮಕೃಷ್ಣ ಭಟ್ ಇವರ ನೇತೃತ್ವದಲ್ಲಿ ಮೂಡಬಿದ್ರೆ ಆರ್.ಕೆ ಎಂಟರ್ಪ್ರೈಸಸ್ ಮತ್ತು ಎಂ.ಎಂ.ಸಿ ಕಾರ್ಕಳ ಪೆಂಡಲ್ ನಿರ್ಮಾಣ ಕೆಲಸ ನಡೆಯುತ್ತಿದೆ.ಪಾಕ‌ ವ್ಯವಸ್ಥೆಗೆ ರಾಜೇಂದ್ರ ಜೈನ್ ಶಿರ್ತಾಡಿ ವ್ಯವಸ್ಥೆ ಕಲ್ಪಿಸಲಿದ್ದಾರೆ.

Related posts

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya

ಏ.24: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!