25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

ವೇಣೂರು: ಭಗವಾನ್ ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕ ಫೆ 22 ರಿಂದ ಮಾ 1ರವರೆಗೆ ನಡೆಯಲಿದ್ದು ಆಹಾರ ತಯಾರಿಕೆ ಸ್ಥಳದಲ್ಲಿ ಚಪ್ಪರ ಮುಹೂರ್ತವು ಮೂಡಬಿದ್ರೆ ಜೈನ‌ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ಫೆ.1 ರಂದು ನಡೆಯಿತು.

ಬೆಟ್ಟದ ಪುರೋಹಿತರಾದ ಚಂದ್ರನಾಥ ಇಂದ್ರ ರವರು ಪೌರೋಹಿತ್ಯದಲ್ಲಿ ಚಪ್ಪರ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ಪ್ರಧಾನ ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ,ಕೋಶಾಧಿಕಾರಿ ಜಯರಾಜ್ ಕಂಬಳಿ, ಪ್ರಮುಖರಾದ ಪ್ರವೀಣ್ ಅಜ್ರಿ,ಮಹಾವೀರ್ ಮೂಡುಕೋಡಿ, ಚಂದ್ರಪ್ರಭ ಜೈನ್, ನವೀನ್ ಚಂದ್ ಬಳ್ಳಾಳ್, ಹಂಡೇಲು ಧನಕೀರ್ತಿ ಬಲಿಪ,ಭರತ್ ರಾಜ್ ಅಜ್ರಿ, ಶಂಭಾಷಿನಿ, ಅಶ್ವಿನಿ ಪ್ರವೀಣ್ ಕುಮಾರ್, ನಿತಿನ್ ಬೊಳ್ಜಾಲು, ವೃಷಭರಾಜ ಅಜ್ರಿ,ಹರ್ಷೇಂದ್ರ ಕುಮಾರ್, ಶರ್ಮಿತ್ ಕುಮಾರ್,ವೈ ಜಯರಾಜ್, ಶಶಿಧರ ಕತ್ತೋಡಿ, ಬ್ರಾಹ್ಮಿ ಮಹಿಳಾ ಸಂಘದ ಸದಸ್ಯರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ರಾಮಕೃಷ್ಣ ಭಟ್ ಇವರ ನೇತೃತ್ವದಲ್ಲಿ ಮೂಡಬಿದ್ರೆ ಆರ್.ಕೆ ಎಂಟರ್ಪ್ರೈಸಸ್ ಮತ್ತು ಎಂ.ಎಂ.ಸಿ ಕಾರ್ಕಳ ಪೆಂಡಲ್ ನಿರ್ಮಾಣ ಕೆಲಸ ನಡೆಯುತ್ತಿದೆ.ಪಾಕ‌ ವ್ಯವಸ್ಥೆಗೆ ರಾಜೇಂದ್ರ ಜೈನ್ ಶಿರ್ತಾಡಿ ವ್ಯವಸ್ಥೆ ಕಲ್ಪಿಸಲಿದ್ದಾರೆ.

Related posts

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya
error: Content is protected !!