25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ, ಬೆಳ್ತಂಗಡಿ ತಾಲೂಕಿನ ಮಡಿವಾಳ ಸಂಘ ಇದರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಆಚರಣೆಯನ್ನು ಫೆ.1 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವಹಿಸಿದರು.
ಉಜಿರೆ ಧ.ಮಂ. ಕಾಲೇಜು ಉಪನ್ಯಾಸಕ ಹಳೆಮನೆ ರಾಜಶೇಖರ ಅವರು ಮಡಿವಾಳ ಮಾಚಿದೇವರ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.
ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಶ್ರೀಧರ್ , ಸಂಘದ ಕಾರ್‍ಯದರ್ಶಿ ಅರುಣ್ ಸೊರಕೆ, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತು ಸದಸ್ಯರು ಹಾಗೂ ಗ್ರಾ.ಪಂ. ಅಧ್ಯಕ್ಷ , ಸದಸ್ಯರು ತಾಲೂಕು ಮಟ್ಟದ ಅಧಿಕಾರಿಗಳು ಮಡಿವಾಳ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ತಾ.ಪಂ. ಸಂಯೋಜಕ ಜಯಾನಂದ ಲಾಯಿಲ ಸ್ವಾಗತಿಸಿದರು. ತಾಲೂಕು ಕಂದಾಯ ಇಲಾಖೆ ಸಿಬ್ಬಂದಿ ಹೇಮಾ ಕಾಯ೯ಕ್ರಮ ನಿರೂಪಿಸಿದರು.

Related posts

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!