27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

ಬೆಳ್ತಂಗಡಿ : ಕಾರು ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿಯ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಬಂಟ್ವಾಳ ತಾಲೂಕಿನ ಮಧ್ವದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು. ಇದರಲ್ಲಿ ಬೈಕ್ ಸವಾರ ಬೆಳ್ತಂಗಡಿಯ ರಮೇಶ್ ಶೆಟ್ಟಿ ಮತ್ತು ಪ್ರೇಮ ದಂಪತಿಯ ಎರಡನೇ ಪುತ್ರ ಪ್ರದೀಶ್ ಶೆಟ್ಟಿ(27) ಎಂಬಾತ ಸಾವನ್ನಪ್ಪಿದ ಯುವಕ.

ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಬೈಕ್ಕಿನಲ್ಲಿ ಬರುತಿದ್ದ ವೇಳೆ ಮಂಗಳೂರು ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಪ್ರದೀಶ್ ಶೆಟ್ಟಿ ಬೆಳ್ತಂಗಡಿಯ ಮುತ್ತೂಟ್ಟು ಫೈನಾನ್ಸ್ ಸಂಸ್ಥೆಯೊಂದರಲ್ಲಿ ನೌಕರಿಯಲ್ಲಿದ್ದು. ಸಂಸ್ಥೆಯ ಕೆಲಸಕ್ಕಾಗಿ ಮಂಗಳೂರಿಗೆ ತೆರಳಿದ್ದ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!