24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬ ಮಹಾನ್ ಉದ್ದೇಶ ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.


ಬಡವರು, ಮಹಿಳೆಯರು, ಯುವಜನರು ಮತ್ತು ಅನ್ನದಾತರೆಂಬ ನಾಲ್ಕು ದೇಶದ ಆಧಾರಸ್ತಂಭಗಳ ಬಗ್ಗೆ ಬಜೆಟ್ ಸಂಪೂರ್ಣ ಕೇಂದ್ರೀಕರಿಸಿದ್ದು, ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಧ್ಯೇಯದಡಿ 2047 ರವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡುವ ಸಂಕಲ್ಪವನ್ನು ಬಜೆಟ್ ಪುನರುಚ್ಚರಿಸಿದೆ.
ಮುಂದಿನ ಪೀಳಿಗೆಯನ್ನು ಗುರಿಯನ್ನಾಗಿರಿಸಿಕೊಂಡು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವಿಕಸಿತ ಭಾರತವಾಗಲಿದೆ.


ರೈತರ ಆದಾಯ ಹೆಚ್ಚಿಸಲು ಅವರಿಗೆ ಅಗತ್ಯವಾದ ನೆರವು ನೀಡುವ, ಒಂದು ಕೋಟಿ ಮನೆಯ ಮೇಲೆ ಸೋಲಾರ್ ಫಲಕಗಳನ್ನು ಅಳವಡಿಸುವ, ಆಯುಷ್ಮಾನ್ ಯೋಜನೆಯನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸುವ ಯೋಜನೆಯು ಸ್ವಾಗತಾರ್ಹವಾಗಿದೆ. ಒಟ್ಟಿನಲ್ಲಿ ದೇಶದ ಸರ್ವರೀತಿಯ ಉನ್ನತಿಗೆ ಬಜೆಟ್ ಪೂರಕವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya
error: Content is protected !!