28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

ಧರ್ಮಸ್ಥಳ: ದೇವರ ಪೂಜೆ, ಆರಾಧನೆ, ಅಭಿಷೇಕದಿಂದ ಪಾಪಗಳ ಕ್ಷಯವಾಗಿ ಪುಣ್ಯ ಸಂಚಯವಾಗುತ್ತದೆ ಎಂದು ಪೂಜ್ಯ ದಿವ್ಯಸಾಗರ ಮುನಿಮಹಾರಾಜರು ಹೇಳಿದರು.
ಅವರು ಫೆ. 2 ರಂದು ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕದ ಸಂದರ್ಭ ಮಂಗಲ ಪ್ರವಚನ ನೀಡಿದರು.

ಶ್ರದ್ಧಾ-ಭಕ್ತಿಯಿಂದ ದೇವರಪೂಜೆ, ಅಭಿಷೇಕ ಮಾಡುವುದರಿಂದ ಎಲ್ಲಾ ಸಂಕಟಗಳ ನಿವಾರಣೆಯಾಗಿ ಜೀವನ ಪಾವನವಾಗುತ್ತದೆ. ಆತ್ಮಕಲ್ಯಾಣವಾಗುತ್ತದೆ. ಸುಖ-ಶಾಂತಿ ಸಿಗುತ್ತದೆ ಎಂದು ಹೇಳಿದರು.


ಪೂಜ್ಯ ಆದಿಸಾಗರ ಮುನಿಮಹಾರಾಜರು ಪ್ರವಚನ ನೀಡಿ ನಾವು ಬೀಜ ಬಿತ್ತಿದಂತೆ ಫಲಸಿಗುವ ಹಾಗೆ ಸ್ವಾರ್ಥ ರಹಿತರಾಗಿ ಸತ್ಕಾರ್ಯ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ. ನಿತ್ಯವೂ ವೃತ-ನಿಯಮಗಳ ಪಾಲನೆಯೊಂದಿಗೆ ದೇವರ ಪೂಜೆ, ಮುನಿಗಳಿಗೆ ಆಹಾರದಾನ ಮಾಡಿದರೆ ಆತ್ಮಕಲ್ಯಾಣವಾಗುತ್ತದೆ ಎಂದು ಹೇಳಿದರು.


ಕಾರ್ಕಳದ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.
ಪೂಜ್ಯ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಾಭಿಷೇಕದಲ್ಲಿ ಭಾಗವಹಿಸಿದರು.


ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ರತ್ನಗಿರಿಯಲ್ಲಿ 216 ಕಲಶಗಳಿಂದ ಜಲಾಭಿಷೇಕ ಹಾಗೂ ಎಳನೀರು, ಗಂಧ, ಚಂದನ, ಅಷ್ಟಗಂಧ ಮೊದಲಾದ ಮಂಗಳದ್ರವ್ಯಗಳಿಂದ ಪಾದಾಭಿಷೇಕ ನಡೆಯಿತು.

Related posts

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!