May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

ಧರ್ಮಸ್ಥಳ: ದೇವರ ಪೂಜೆ, ಆರಾಧನೆ, ಅಭಿಷೇಕದಿಂದ ಪಾಪಗಳ ಕ್ಷಯವಾಗಿ ಪುಣ್ಯ ಸಂಚಯವಾಗುತ್ತದೆ ಎಂದು ಪೂಜ್ಯ ದಿವ್ಯಸಾಗರ ಮುನಿಮಹಾರಾಜರು ಹೇಳಿದರು.
ಅವರು ಫೆ. 2 ರಂದು ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕದ ಸಂದರ್ಭ ಮಂಗಲ ಪ್ರವಚನ ನೀಡಿದರು.

ಶ್ರದ್ಧಾ-ಭಕ್ತಿಯಿಂದ ದೇವರಪೂಜೆ, ಅಭಿಷೇಕ ಮಾಡುವುದರಿಂದ ಎಲ್ಲಾ ಸಂಕಟಗಳ ನಿವಾರಣೆಯಾಗಿ ಜೀವನ ಪಾವನವಾಗುತ್ತದೆ. ಆತ್ಮಕಲ್ಯಾಣವಾಗುತ್ತದೆ. ಸುಖ-ಶಾಂತಿ ಸಿಗುತ್ತದೆ ಎಂದು ಹೇಳಿದರು.


ಪೂಜ್ಯ ಆದಿಸಾಗರ ಮುನಿಮಹಾರಾಜರು ಪ್ರವಚನ ನೀಡಿ ನಾವು ಬೀಜ ಬಿತ್ತಿದಂತೆ ಫಲಸಿಗುವ ಹಾಗೆ ಸ್ವಾರ್ಥ ರಹಿತರಾಗಿ ಸತ್ಕಾರ್ಯ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ. ನಿತ್ಯವೂ ವೃತ-ನಿಯಮಗಳ ಪಾಲನೆಯೊಂದಿಗೆ ದೇವರ ಪೂಜೆ, ಮುನಿಗಳಿಗೆ ಆಹಾರದಾನ ಮಾಡಿದರೆ ಆತ್ಮಕಲ್ಯಾಣವಾಗುತ್ತದೆ ಎಂದು ಹೇಳಿದರು.


ಕಾರ್ಕಳದ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.
ಪೂಜ್ಯ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಾಭಿಷೇಕದಲ್ಲಿ ಭಾಗವಹಿಸಿದರು.


ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ರತ್ನಗಿರಿಯಲ್ಲಿ 216 ಕಲಶಗಳಿಂದ ಜಲಾಭಿಷೇಕ ಹಾಗೂ ಎಳನೀರು, ಗಂಧ, ಚಂದನ, ಅಷ್ಟಗಂಧ ಮೊದಲಾದ ಮಂಗಳದ್ರವ್ಯಗಳಿಂದ ಪಾದಾಭಿಷೇಕ ನಡೆಯಿತು.

Related posts

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!