27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

ಧರ್ಮಸ್ಥಳ: ದೇವರ ಪೂಜೆ, ಆರಾಧನೆ, ಅಭಿಷೇಕದಿಂದ ಪಾಪಗಳ ಕ್ಷಯವಾಗಿ ಪುಣ್ಯ ಸಂಚಯವಾಗುತ್ತದೆ ಎಂದು ಪೂಜ್ಯ ದಿವ್ಯಸಾಗರ ಮುನಿಮಹಾರಾಜರು ಹೇಳಿದರು.
ಅವರು ಫೆ. 2 ರಂದು ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕದ ಸಂದರ್ಭ ಮಂಗಲ ಪ್ರವಚನ ನೀಡಿದರು.

ಶ್ರದ್ಧಾ-ಭಕ್ತಿಯಿಂದ ದೇವರಪೂಜೆ, ಅಭಿಷೇಕ ಮಾಡುವುದರಿಂದ ಎಲ್ಲಾ ಸಂಕಟಗಳ ನಿವಾರಣೆಯಾಗಿ ಜೀವನ ಪಾವನವಾಗುತ್ತದೆ. ಆತ್ಮಕಲ್ಯಾಣವಾಗುತ್ತದೆ. ಸುಖ-ಶಾಂತಿ ಸಿಗುತ್ತದೆ ಎಂದು ಹೇಳಿದರು.


ಪೂಜ್ಯ ಆದಿಸಾಗರ ಮುನಿಮಹಾರಾಜರು ಪ್ರವಚನ ನೀಡಿ ನಾವು ಬೀಜ ಬಿತ್ತಿದಂತೆ ಫಲಸಿಗುವ ಹಾಗೆ ಸ್ವಾರ್ಥ ರಹಿತರಾಗಿ ಸತ್ಕಾರ್ಯ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ. ನಿತ್ಯವೂ ವೃತ-ನಿಯಮಗಳ ಪಾಲನೆಯೊಂದಿಗೆ ದೇವರ ಪೂಜೆ, ಮುನಿಗಳಿಗೆ ಆಹಾರದಾನ ಮಾಡಿದರೆ ಆತ್ಮಕಲ್ಯಾಣವಾಗುತ್ತದೆ ಎಂದು ಹೇಳಿದರು.


ಕಾರ್ಕಳದ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.
ಪೂಜ್ಯ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಾಭಿಷೇಕದಲ್ಲಿ ಭಾಗವಹಿಸಿದರು.


ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ರತ್ನಗಿರಿಯಲ್ಲಿ 216 ಕಲಶಗಳಿಂದ ಜಲಾಭಿಷೇಕ ಹಾಗೂ ಎಳನೀರು, ಗಂಧ, ಚಂದನ, ಅಷ್ಟಗಂಧ ಮೊದಲಾದ ಮಂಗಳದ್ರವ್ಯಗಳಿಂದ ಪಾದಾಭಿಷೇಕ ನಡೆಯಿತು.

Related posts

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
error: Content is protected !!