26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಲಾಯಿಲ ಬಳಿ ಕಾರು ಚಾಲಕ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ರಿಕ್ಷಾ ಚಾಲಕ ಹಾಗೂ ರಿಕ್ಷಾದಲ್ಲಿದ್ದ ಮಗುವಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಫೆ,1 ರಂದು ನಡೆದಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಅರಿಸ್ (35) ಎಂಬವರ ದೂರಿನಂತೆ, ಫೆ. 01 ರಂದು ಮಧ್ಯಾಹ್ನ ಅರಿಸ್ ಅವರ ಬಾಬ್ತು KA 70-6618 ನೇ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಪ್ರಯಾಣಿಕರಾದ ಅನ್ನತ್‌, ಸನ್ವಝ್‌ ಬಾನು, ಸಫಿಯಾ, ಮಗು ಮಹಮ್ಮದ್‌ ಶಾಝ್‌, ಮಗು ಫಾತಿಮಾ ನಹ್ಲಾ ಎಂಬವರನ್ನು ಸಹ ಪ್ರಯಾಣಿಕರನ್ನಾಗಿ ಕುಳ್ಳಿರಿಸಿಕೊಂಡು, ಬೆಳ್ತಂಗಡಿ ಲಾಯಿಲ ಅಪೂರ್ವ ಹೋಟೇಲ್‌ ಬಳಿ ತಲುಪುತ್ತಿದ್ದಂತೆ, KA 19 MN 5456 ನೇ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಬಂದು ಆಟೋ ರಿಕ್ಷಾಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ಅರಿಸ್ ಹಾಗೂ ರಿಕ್ಷಾದಲ್ಲಿದ್ದ ಮಗು ಫಾತಿಮಾ ನಹ್ಲಾ ಎಂಬವರಿಗೆ ಗಾಯಗಳಾಗಿದ್ದು, ಗಾಯಾಳುಗಳು ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ‌ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 11/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya
error: Content is protected !!