ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಲಾಯಿಲ ಬಳಿ ಕಾರು ಚಾಲಕ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ರಿಕ್ಷಾ ಚಾಲಕ ಹಾಗೂ ರಿಕ್ಷಾದಲ್ಲಿದ್ದ ಮಗುವಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಫೆ,1 ರಂದು ನಡೆದಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಅರಿಸ್ (35) ಎಂಬವರ ದೂರಿನಂತೆ, ಫೆ. 01 ರಂದು ಮಧ್ಯಾಹ್ನ ಅರಿಸ್ ಅವರ ಬಾಬ್ತು KA 70-6618 ನೇ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಪ್ರಯಾಣಿಕರಾದ ಅನ್ನತ್‌, ಸನ್ವಝ್‌ ಬಾನು, ಸಫಿಯಾ, ಮಗು ಮಹಮ್ಮದ್‌ ಶಾಝ್‌, ಮಗು ಫಾತಿಮಾ ನಹ್ಲಾ ಎಂಬವರನ್ನು ಸಹ ಪ್ರಯಾಣಿಕರನ್ನಾಗಿ ಕುಳ್ಳಿರಿಸಿಕೊಂಡು, ಬೆಳ್ತಂಗಡಿ ಲಾಯಿಲ ಅಪೂರ್ವ ಹೋಟೇಲ್‌ ಬಳಿ ತಲುಪುತ್ತಿದ್ದಂತೆ, KA 19 MN 5456 ನೇ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಬಂದು ಆಟೋ ರಿಕ್ಷಾಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ಅರಿಸ್ ಹಾಗೂ ರಿಕ್ಷಾದಲ್ಲಿದ್ದ ಮಗು ಫಾತಿಮಾ ನಹ್ಲಾ ಎಂಬವರಿಗೆ ಗಾಯಗಳಾಗಿದ್ದು, ಗಾಯಾಳುಗಳು ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ‌ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 11/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya
error: Content is protected !!