May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ:ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ( ಮಾಲಕರ )ಸಂಘದ ವಾರ್ಷಿಕ ಕ್ರೀಡಾಕೂಟ ಮಂಗಳೂರಿನ ಕೆ ಪಿ ಟಿ ಕ್ರಿಡಾಂಗಣದಲ್ಲಿ ನಡೆಯಿತು .

ಕ್ರೀಡಾ ಕೂಟವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೊಶಿಯೇಶನ್ ಇದರ ಅಧ್ಯಕ್ಷ ಮೊಹಮ್ಮದ್ ಮುನೀರ್, ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗೂ ಕಾರ್ಯದರ್ಶಿಯಾದ ಅರಿಹಂತ್ ಜೈನ್ ರವರು ಉದ್ಘಾಟಿಸಿದರು.

ಉಭಯ ಜಿಲ್ಲೆಯ ಪ್ರಮುಖ 8 ತಾಲ್ಲೂಕು ತಂಡಗಳು ಕ್ರೀಡಾ ಕೂಟದಲ್ಲಿ ಪಾಳ್ಗೊಂಡಿದವು .
ಕ್ರಿಕೆಟ್ ವಿಭಾಗದಲ್ಲಿ ಮಂಗಳೂರು ತಂಡ ಪ್ರಥಮ ಸ್ಥಾನಗಳಿಸಿದರೆ, ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಹಗ್ಗ ಜಗ್ಗಾಟದಲ್ಲಿ ಮೂಡಬಿದಿರೆ ಪ್ರಥಮ ಸ್ಥಾನ ಪಡೆದರೆ ಉಡುಪಿ ದ್ವಿತೀಯ ಸ್ಥಾನ ಪಡೆಯಿತು.

ಸಂಚಾಲಕರಾಗಿ ರಿಯಾಜ್ ಮಂಗಳೂರು ಹಾಗೂ ಫಾರೂಖ್ ಮೂಡಬಿದ್ರೆ ಕ್ರೀಡಾ ಕೂಟವನ್ನು ನಡೆಸಿ ಕೊಟ್ಟರು. ಉಭಯ ಜಿಲ್ಲೆಯ ರಿಟೆಲರ್ ಅಸೊಶಿಯೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಸಲೀಮ್ ಮೊಬೈಲ್ ಕೇರ್, ಗೌರವ ಅಧ್ಯಕ್ಷರಾದ ಗುರುದತ್ ಕಾಮತ್, ಕೋಶಾಧಿಕಾರಿ ಮೊಹಮ್ಮದ್ ಅಜ಼ರ್, ಜೊತೆ ಕಾರ್ಯದರ್ಶಿ ರಾಘವೇಂದ್ರ ಕಿನ್ನಿಗೊಳಿ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಶೈಲೆಂದ್ರ ಶರಲಾಯ, ಕಾರ್ಯದರ್ಶಿ ಪ್ರಶಾಂತ್ ಕಾರ್ಕಳ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya
error: Content is protected !!