28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬ ಮಹಾನ್ ಉದ್ದೇಶ ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.


ಬಡವರು, ಮಹಿಳೆಯರು, ಯುವಜನರು ಮತ್ತು ಅನ್ನದಾತರೆಂಬ ನಾಲ್ಕು ದೇಶದ ಆಧಾರಸ್ತಂಭಗಳ ಬಗ್ಗೆ ಬಜೆಟ್ ಸಂಪೂರ್ಣ ಕೇಂದ್ರೀಕರಿಸಿದ್ದು, ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಧ್ಯೇಯದಡಿ 2047 ರವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡುವ ಸಂಕಲ್ಪವನ್ನು ಬಜೆಟ್ ಪುನರುಚ್ಚರಿಸಿದೆ.
ಮುಂದಿನ ಪೀಳಿಗೆಯನ್ನು ಗುರಿಯನ್ನಾಗಿರಿಸಿಕೊಂಡು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವಿಕಸಿತ ಭಾರತವಾಗಲಿದೆ.


ರೈತರ ಆದಾಯ ಹೆಚ್ಚಿಸಲು ಅವರಿಗೆ ಅಗತ್ಯವಾದ ನೆರವು ನೀಡುವ, ಒಂದು ಕೋಟಿ ಮನೆಯ ಮೇಲೆ ಸೋಲಾರ್ ಫಲಕಗಳನ್ನು ಅಳವಡಿಸುವ, ಆಯುಷ್ಮಾನ್ ಯೋಜನೆಯನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸುವ ಯೋಜನೆಯು ಸ್ವಾಗತಾರ್ಹವಾಗಿದೆ. ಒಟ್ಟಿನಲ್ಲಿ ದೇಶದ ಸರ್ವರೀತಿಯ ಉನ್ನತಿಗೆ ಬಜೆಟ್ ಪೂರಕವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Related posts

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!