25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬ ಮಹಾನ್ ಉದ್ದೇಶ ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.


ಬಡವರು, ಮಹಿಳೆಯರು, ಯುವಜನರು ಮತ್ತು ಅನ್ನದಾತರೆಂಬ ನಾಲ್ಕು ದೇಶದ ಆಧಾರಸ್ತಂಭಗಳ ಬಗ್ಗೆ ಬಜೆಟ್ ಸಂಪೂರ್ಣ ಕೇಂದ್ರೀಕರಿಸಿದ್ದು, ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಧ್ಯೇಯದಡಿ 2047 ರವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡುವ ಸಂಕಲ್ಪವನ್ನು ಬಜೆಟ್ ಪುನರುಚ್ಚರಿಸಿದೆ.
ಮುಂದಿನ ಪೀಳಿಗೆಯನ್ನು ಗುರಿಯನ್ನಾಗಿರಿಸಿಕೊಂಡು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವಿಕಸಿತ ಭಾರತವಾಗಲಿದೆ.


ರೈತರ ಆದಾಯ ಹೆಚ್ಚಿಸಲು ಅವರಿಗೆ ಅಗತ್ಯವಾದ ನೆರವು ನೀಡುವ, ಒಂದು ಕೋಟಿ ಮನೆಯ ಮೇಲೆ ಸೋಲಾರ್ ಫಲಕಗಳನ್ನು ಅಳವಡಿಸುವ, ಆಯುಷ್ಮಾನ್ ಯೋಜನೆಯನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸುವ ಯೋಜನೆಯು ಸ್ವಾಗತಾರ್ಹವಾಗಿದೆ. ಒಟ್ಟಿನಲ್ಲಿ ದೇಶದ ಸರ್ವರೀತಿಯ ಉನ್ನತಿಗೆ ಬಜೆಟ್ ಪೂರಕವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Related posts

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya
error: Content is protected !!